Home Latest News ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ
Latest News

ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ

Share
Share

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಯಲ್ಲಿ ಗುರುವಾರದಿಂದ ಶನಿವಾರದವರೆಗೆ ನಡೆಯಲಿರುವ ದತ್ತ ಜಯಂತಿಗೆ ಹವಾಮಾನ ವೈಫರೀತ್ಯಾ ಭಾರೀ ಅಡ್ಡಿಮಾಡಿದೆ.

ಗುರುವಾರದಿಂದ ಗಿರೀಭಾಗದಲ್ಲಿ ದಟ್ಟ ಮಂಜು ಹಾಗೂ ಸಾಧಾರಣ ಮಳೆ ಆಗುತ್ತಿದ್ದು ಇದು ದತ್ತ ಜಯಂತಿ ಧಾರ್ಮಿಕ ಆಚರಣೆಗಳಿಗೆ ಅಡಚಣೆ ಮಾಡಿದೆ. ಶುಕ್ರವಾರ ಬಾಬಾಬುಡನ್ ದರ್ಗಾ ಹಾಗೂ ಸುತ್ತಮುತ್ತ ಭಾರಿ ಗಾಳಿ ಹಾಗೂ ಸಾಧಾರಣ ಮಳೆ ಆಗಿದ್ದು, ಗಾಳಿಗೆ ದತ್ತ ಪೀಠದಲ್ಲಿ ಪೂಜೆ ಹೋಮ ಹವನ ನಡೆಸಲು ಹಾಕಿದ್ದ ಶಾಮಿಯಾನ ಮತ್ತು ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಜೊತೆಗೆ ಮೋಡ ಕವಿದ ವಾತಾವರಣ ಹಾಗೂ ಕೊರೆಯುವ ಚಳಿ ಮಳೆ ಪರಿಣಾಮ ಗಿರಿಯಲ್ಲಿ ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸರು ಹೋಮ್ ಗಾರ್ಡ್ ಗಳು ಮತ್ತಿತರರ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ಕೆಲಸ ಮಾಡಲು ಪರದಾಡುತಿದ್ದಾರೆ.
ಗಿರಿಯಲ್ಲಿ ಭಾರೀ ಚಳಿ ಇದ್ದು ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ನಡುಗುತ್ತಾ ಕೆಲಸ ಮಾಡುವಂತಾಗಿದ್ದು ಭಾರೀ ಚಳಿ ಕಾರಣ ಪೊಲೀಸ್ ಭದ್ರತಾ ಸಿಬ್ಬಂದಿ ಆರೋಗ್ಯದ ಮೇಲೂ ಗಂಭೀರ ಪರಿಣಾಮ ವುಂಟುಮಾಡುವ ಸಮಸ್ಯೆ ಎದುರಾಗಿದೆ.
ಅಲ್ಲದೆ, ಗಿರಿ ತಲುಪುವ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಆಗಿದ್ದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಜೊತೆಗೆ ನಾಳೆ ಕೂಡ ದತ್ತ ಜಯಂತಿ ಕೊನೆ ದಿನವಾಗಿದೆ, ಮತ್ತಷ್ಟು ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...