Home Latest News ತರೀಕೆರೆ ಕೀರ್ತಿ ಪತಾಕೆ ಹಾರಿಸಿದ ಸಮೀಕ್ಷಾ : ಥ್ರೋಬಾಲ್ ರಾಷ್ಟ್ರಮಟ್ಟದಲ್ಲಿ ಚಿನ್ನ
Latest News

ತರೀಕೆರೆ ಕೀರ್ತಿ ಪತಾಕೆ ಹಾರಿಸಿದ ಸಮೀಕ್ಷಾ : ಥ್ರೋಬಾಲ್ ರಾಷ್ಟ್ರಮಟ್ಟದಲ್ಲಿ ಚಿನ್ನ

Share
Share

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ಎಂ.ಸಿ ಹಳ್ಳಿ ಪ್ರೌಢಶಾಲೆಯ 9 ನೇ ತರಗತಿಯ ಅಪ್ಪಟ ಗ್ರಾಮೀಣ ಕ್ರೀಡಾ ಪ್ರತಿಭೆ ಸಮೀಕ್ಷಾ ರಾಷ್ಟ್ರಮಟ್ಟದ ಚಿನ್ನದ ಪದಕ ಗೆದ್ದು ದಾಖಲೆ ಮಾಡಿ ಊರಿಗೆ,ನಾಡಿಗೆ ಕೀರ್ತಿ ತಂದಿರುವುದು ಸಂತೋಷ .
ರಾಷ್ಟ್ರಮಟ್ಟದ 19 ವರ್ಷದೊಳಗಿನ ಥ್ರೋಬಾಲ್ ಸ್ಪರ್ಧೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದ್ದು ಎಂ.ಸಿ ಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿ ಸಮೀಕ್ಷಾ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕದ ಜೊತೆಗೆ ಮ್ಯಾನ್‌ ಅಫ್ ದ ಮ್ಯಾಚ್ ಪ್ರಶಸ್ತಿ ಪಡೆದಿರುವುದು ಶಾಲೆಗಷ್ಟೇ ಅಲ್ಲದೆ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿರುವುದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ದೈಹಿಕ ಶಿಕ್ಷಕರಾದ ಬಿ.ಪಿ.ಕುಮಾರಸ್ವಾಮಿ ಉತ್ತಮ ತರಭೇತಿ ನೀಡಿದ್ದು ಅವರನ್ನು ಅಭಿನಂದಿಸಲೇ ಬೇಕು.
ಚಿನ್ನ ಮತ್ತು ಕೀರ್ತಿ ತಂದ ಸಮೀಕ್ಷಾ ಎಂ.ಸಿ.ಹಳ್ಳಿಯ ಕುಮಾರಸ್ವಾಮಿ ಮತ್ತು ರೇಖಾ ದಂಪತಿಯ ಪುತ್ರಿಯಾಗಿದ್ದು ಇವಳ ಸಾಧನೆಗೆ ಮುಖ್ಯ ಶಿಕ್ಷಕಿ ವೀಣಾಬಾಯಿ ಮತ್ತು ಶಿಕ್ಷಕರುಗಳು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಹಿನುದ್ದಿನ್ ಮತ್ತು ಸದಸ್ಯರಗಳು ಹಾಗು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎನ್.ರಾಮೇಗೌಡ ಮತ್ತು ಸದಸ್ಯರಗಳು ಮತ್ತು ಊರಿನ ಪ್ರಮುಖರು ಅಭಿನಂದಿಸಿ ಬೆನ್ನು ತಟ್ಟಿದ್ದಾರೆ.
ಅಪ್ಪಟ ಗ್ರಾಮೀಣ ಪ್ರದೇಶದ ಸಮೀಕ್ಷಾ ಹದಿನೆಂಟು ವರ್ಷಗಳ ಹಿಂದೆ ಮಾಡಿದ್ದ ಕರ್ನಾಟಕದ ಸಾಧನೆಯನ್ನು ಈ ಬಾರಿ ಮತ್ತೆ ಮಾಡಿರುವುದು ಕೂಡ ದಾಖಲೆ ರಾಷ್ಟ್ರ ಮಟ್ಟದ ಸಾಧನೆಯ ಜೊತೆಗೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ವಿಜಯ ಸಾಧಿಸಲಿ .

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...