Home Political News ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ಬಿಎಲ್ ಶಂಕರ್ ನೇಮಿಸಿ ರಾಜ್ಯ ಸರ್ಕಾರ ಆದೇಶ
Political News

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ಬಿಎಲ್ ಶಂಕರ್ ನೇಮಿಸಿ ರಾಜ್ಯ ಸರ್ಕಾರ ಆದೇಶ

Share
Share

ಚಿಕ್ಕಮಗಳೂರು : ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ ಬಿ.ಎಲ್.ಶಂಕರ್ ರವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಬಿ.ಎಲ್.ಶಂಕರ್ ಕಿರಿಯ ವಯಸ್ಸಿನಲ್ಲಿ ಜನತಾ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಇಪ್ಪತೈದನೇ ವಯಸ್ಸಿನಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಯುವಜನ ಸೇವಾ ಮಂತ್ರಿ ಯಾದವರು. ಉತ್ತಮ ವಾಗ್ಮಿ, ಬದ್ದತೆ ಇಟ್ಟುಕೊಂಡು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾನಸ ಪುತ್ರ ಎಂದು ಬಿಂಬಿತರಾದವರು ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಚುನಾಯಿತರಾಗಿದ್ದು ಬಿಟ್ಟರೆ ಸ್ಪರ್ಧೆ ಮಾಡಿದ ಚುನಾವಣೆ ಯಲ್ಲಿ ಸೋತ ದಾಖಲೆಯೇ ಹೆಚ್ಚು.
ಜೆ.ಹೆಚ್.ಪಟೇಲರು ಮಾತ್ರ ಬೆಳಿಗ್ಗೆ ವಿಧಾನ ಪರಿಷತ್ ಸದಸ್ಯರಾಗಿ ಮಾಡಿ ಸಂಜೆ ಮಂತ್ರಿ ಮಾಡಿದ್ದು ದಾಖಲೆ. ನಂತರ ವಿಧಾನ ಪರಿಷತ್ ಸಭಾಪತಿಯಾಗಿದ್ದರು.

ಕಳೆದ ಇಪ್ಪತ್ತು ವರ್ಷಗಳಿಂದ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ನಿರಂತರ ಸೇವೆಯ ಜೊತೆಗೆ ಜಿಲ್ಲಾ ರಾಜಕಾರಣದಲ್ಲಿ ಕೈ ಆಡಿಸುವುದರ ಜೊತೆಗೆ ಅವರು ರಾಜಕೀಯವಾಗಿ ಏನು ? ಏಕೆ ಎಂಬಂತೆ ಆಗಿದ್ದಾರೆ.
ಈ ಸಾರಿ ಎಮ್.ಎಲ್.ಸಿ ಗ್ಯಾರಂಟಿ ಆಯ್ಯೋ ರಾಜ್ಯಸಭೆಗೆ ಹೋಗೆ ಹೋಗುತ್ತಾರೆ ಎನ್ನುವವರು ಕಾಯುತ್ತಾ ಇದ್ದಾರೆ. ಈಗ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿರುವುದು ಮತ್ತೇನು ಕೇಳಬೇಡಿ ಎಂಬುದರ ಸಿಗ್ನಲ್ ಎಂದು ಡಿ.ಕೆ.ಸಿ ಕಡೆಯವರು ವಾದಿಸುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...