Home Latest News ಬಾಳೆಹೊನ್ನೂರು ಮಠಕ್ಕೆ ರೊಬೋ ಆನೆ ಕೊಡುಗೆ ಕೊಟ್ಟ ಶಿಲ್ಪ ಶೆಟ್ಟಿ
Latest News

ಬಾಳೆಹೊನ್ನೂರು ಮಠಕ್ಕೆ ರೊಬೋ ಆನೆ ಕೊಡುಗೆ ಕೊಟ್ಟ ಶಿಲ್ಪ ಶೆಟ್ಟಿ

Share
Share

ಚಿಕ್ಕಮಗಳೂರು : ಮೂಲತಃ ಕನ್ನಡಿಗರೇ ಆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಬಾಳೆಹೊನ್ನೂರಿನ ಭದ್ರಾನದಿ ತಟದಲ್ಲಿರುವ ರಂಭಾಪುರಿ ಮಠಕ್ಕೆ ಜೀವಂತ ಆನೆಯನ್ನು ನಾಚಿಸುವಂತಹಾ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸುವ ಮೂಲಕ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ.

ನೋಡಲು ಥೇಟ್ ನಿಜವಾದ ಆನೆಯಂತೆ ಕಾಣುವ ಈ ರೋಬೋಟಿಕ್ ಎಲಿಫೆಂಟ್ ಸದಾ ಮಠದ ಆವರಣದಲ್ಲೇ ಇದ್ದು ಭಕ್ತರನ್ನ ಆಶೀರ್ವದಿಸಲಿದೆ. ಈ ರೋಬೋಟಿಕ್ ಆನೆ ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಳುಗಾಡಿಸುತ್ತಿರವ ಆನೆಯನ್ನ ನೋಡಿದರೆ ನಿಜವಾದ ಆನೆ ಕೂಡ ಒಂದು ಕ್ಷಣ ವಿಚಲಿತಗೊಳ್ಳಲಿದ್ದು, ನೋಡಿದ ಕೂಡಲೇ ನಿಜವಾದ ಆನೆ ಎಂದೇ ಭಾಸವಾಗುವಂತಿದೆ. ನಟಿ ಶಿಲ್ಪಾಶೆಟ್ಟಿ ಅವರು ಮಠಕ್ಕೆ ನಿಜವಾದ ಆನೆಯನ್ನೇ ಕೊಡುಗೆಯಾಗಿ ಕೊಡುವವರಿದ್ದರು. ಆದರೆ, ಸರ್ಕಾರದ ಕಾನೂನಿನಡಿ ಕಾನೂನಿನ ತೊಡಕಾಗಬಹುದು ಎಂದು ಕಾಡಿನ ಆನೆಯನ್ನ ಹೋಲುವ ರೋಬೋಟಿಕ್ ಆನೆಯನ್ನ ಕೊಡುಗೆಯಾಗಿ ನೀಡಿದ್ದಾರೆ. ಈ ಆನೆ ಭಕ್ತರಿಗೆ ಆಶೀರ್ವಾದ ಕೂಡ ಮಾಡಲಿದೆ. ರಂಭಾಪುರಿ ಶ್ರೀಗಳು ಈ ರೋಬೋಟಿಕ್ ಆನೆಯನ್ನ ಉದ್ಘಾಟಿಸಿದ ಕೂಡಲೇ ಮಠಕ್ಕೆ ಬಂದಿದ್ದ ನೂರಾರು ಭಕ್ತರು ಆನೆಯ ಆಶೀರ್ವಾದ ಪಡೆದು, ಫೋಟೊ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...