Home Latest News ಮಲೆನಾಡ ಆನೆ ಹಾವಳಿಗೆ ಶಾಶ್ವತ ಪರಿಹಾರ : ಸಚಿವ ಈಶ್ವರ ಖಂಡ್ರೆ
Latest News

ಮಲೆನಾಡ ಆನೆ ಹಾವಳಿಗೆ ಶಾಶ್ವತ ಪರಿಹಾರ : ಸಚಿವ ಈಶ್ವರ ಖಂಡ್ರೆ

Share
Share

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಪ್ರಯತ್ನ ಮಾಡುವುದಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು.
ಬಾಳೆಹೊನ್ನೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದ್ದು. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಅರಣ್ಯ ಪ್ರದೇಶ ಕಡಿಮೆ ಆಗುತ್ತಿರುವುದರಿಂದ ಮಾನವ- ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದರು.

ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದರ ಜೊತೆಗೆ 2 ಸಾವಿರ ಹೆಕ್ಟೇರ್ ಕಾನನ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು. ಈ ಭೂಮಿಯಲ್ಲಿ ಮನುಷ್ಯನಿಗೆ ಬದುಕಲು ಹೇಗೆ ಹಕ್ಕಿದೆಯೋ ಅದೇ ರೀತಿ ಎಲ್ಲ ಜೀವಜಂತುಗಳಿಗೂ ಬದುಕುವ ಹಕ್ಕಿದೆ. ವನ್ಯ ಜೀವಿಗಳೊಂದಿಗೆ ಸಹಬಾಳ್ವೆ ಈ ಹೊತ್ತಿನ ಅಗತ್ಯವಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.
ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಬಸವಣ್ಣನವರ ತತ್ವದಡಿ ನಡೆಯುತ್ತಿರುವುದು ನಮ್ಮ ಸರ್ಕಾರ. ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲು ಕೇಳುವ ಹಕ್ಕಿದೆ ಎಂದರು.
ಸರ್ಕಾರ ಶಾಶ್ವತ ಹಿಂದುಳಿದವರ್ಗಗಳ ಆಯೋಗವನ್ನು ಸಾಂವಿಧಾನಿಕವಾಗಿ ರಚಿಸಿದ್ದು, ಅದು ಅಧ್ಯಯನ ಮಾಡಿ ವರದಿ ನೀಡುತ್ತದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದಲ್ಲಿ ಈ ಬಗ್ಗೆ ಪರಾಮರ್ಶಿಸಿ, ಯಾವುದೆ ಜಾತಿಯ ಜನರಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...