Home Crime News ಕಳ್ಳತನ ಮಾಡಲು ಬಂದಿದ್ದ ಖದೀಮನನ್ನು ಹಿಡಿದುಕೊಟ್ಟ ಅಪಾರ್ಟ್ ಮೆಂಟ್ ನಿವಾಸಿಗಳು
Crime News

ಕಳ್ಳತನ ಮಾಡಲು ಬಂದಿದ್ದ ಖದೀಮನನ್ನು ಹಿಡಿದುಕೊಟ್ಟ ಅಪಾರ್ಟ್ ಮೆಂಟ್ ನಿವಾಸಿಗಳು

Share
Share

ಚಿಕ್ಕಮಗಳೂರು : ನಗರದ ವಿಜಯನಗರ ಬಡಾವಣೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ಕಳೆದ ರಾತ್ರಿ ಸರಣಿಯಾಗಿ ಮನೆ ಕಳ್ಳತನ ಮಾಡಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯ ನಿವಾಸಿಗಳೇ ಕಳ್ಳನನ್ನು ಹಿಡಿದುಕೊಟ್ಟ ಘಟನೆ ನಡೆದಿದೆ.

ಚಿಕ್ಕಮಗಳೂರಿನ ವಿಜಯನಗರ ಐದನೇ ಕ್ರಾಸ್ ನ ಕುವೆಂಪು ನಗರ ಬಳಿ ಅಪಾರ್ಟ್ ಮೆಂಟ್ ನಲ್ಲಿ ಕಳ್ಳತನ ಮಾಡಲು ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಕೋಲ್ಕತ್ತಾ ಮೂಲದ ಇಬ್ಬರು ಕಳ್ಳರು ಅಪಾರ್ಟ್ಮೆಂಟಿನ ಎಲ್ಲರ ಮನೆಯ ಬಾಗಿಲಿನ ಮುಂದಿನ ಬೋಲ್ಟ್ ಗಳನ್ನು ಹೊರಗಿನಿಂದ ಹಾಕಿ, ಹಿಂಬದಿಯಿಂದ ನುಗ್ಗಿ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಅಪಾರ್ಟ್ಮೆಂಟಿನ ಎಲ್ಲರೂ ಸೇರಿ ಓರ್ವ ಕಳ್ಳನನ್ನು ಹಿಡಿದು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನ ಮಾಡಲು ಬಂದಿದ್ದ ಇನ್ನೊಬ್ಬ ಪರಾರಿಯಾಗಿದ್ದು ಪೊಲೀಸರು ‌ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸ್ಥಳೀಯರು ಕಳ್ಳನನ್ನು ಹಿಡಿಯುವ ಕಾರ್ಯಾಚರಣೆ ರೋಚಕವಾಗಿತ್ತು ಕಳುವು ಮಾಡಲು ಯತ್ನದ ಸುಳಿವು ಸಿಗುತ್ತಿದ್ದಂತೆ ಪರಸ್ಪರ ಫೋನ್ ಕರೆ ಮಾಡಿಕೊಂಡು ಅಪಾರ್ಟ್‌ಮೆಂಟ್ ನ ನಿವಾಸಿಗಳೆಲ್ಲಾ ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಹಿಡಿದಿದ್ದಾರೆ ನಗರ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಾರಾಗೃಹಕ್ಕೆ ಕಳುಹಿಸಲಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...