Home Crime News ಕಳ್ಳತನ ಮಾಡಲು ಬಂದಿದ್ದ ಖದೀಮನನ್ನು ಹಿಡಿದುಕೊಟ್ಟ ಅಪಾರ್ಟ್ ಮೆಂಟ್ ನಿವಾಸಿಗಳು
Crime News

ಕಳ್ಳತನ ಮಾಡಲು ಬಂದಿದ್ದ ಖದೀಮನನ್ನು ಹಿಡಿದುಕೊಟ್ಟ ಅಪಾರ್ಟ್ ಮೆಂಟ್ ನಿವಾಸಿಗಳು

Share
Share

ಚಿಕ್ಕಮಗಳೂರು : ನಗರದ ವಿಜಯನಗರ ಬಡಾವಣೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ಕಳೆದ ರಾತ್ರಿ ಸರಣಿಯಾಗಿ ಮನೆ ಕಳ್ಳತನ ಮಾಡಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯ ನಿವಾಸಿಗಳೇ ಕಳ್ಳನನ್ನು ಹಿಡಿದುಕೊಟ್ಟ ಘಟನೆ ನಡೆದಿದೆ.

ಚಿಕ್ಕಮಗಳೂರಿನ ವಿಜಯನಗರ ಐದನೇ ಕ್ರಾಸ್ ನ ಕುವೆಂಪು ನಗರ ಬಳಿ ಅಪಾರ್ಟ್ ಮೆಂಟ್ ನಲ್ಲಿ ಕಳ್ಳತನ ಮಾಡಲು ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಕೋಲ್ಕತ್ತಾ ಮೂಲದ ಇಬ್ಬರು ಕಳ್ಳರು ಅಪಾರ್ಟ್ಮೆಂಟಿನ ಎಲ್ಲರ ಮನೆಯ ಬಾಗಿಲಿನ ಮುಂದಿನ ಬೋಲ್ಟ್ ಗಳನ್ನು ಹೊರಗಿನಿಂದ ಹಾಕಿ, ಹಿಂಬದಿಯಿಂದ ನುಗ್ಗಿ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಅಪಾರ್ಟ್ಮೆಂಟಿನ ಎಲ್ಲರೂ ಸೇರಿ ಓರ್ವ ಕಳ್ಳನನ್ನು ಹಿಡಿದು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನ ಮಾಡಲು ಬಂದಿದ್ದ ಇನ್ನೊಬ್ಬ ಪರಾರಿಯಾಗಿದ್ದು ಪೊಲೀಸರು ‌ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸ್ಥಳೀಯರು ಕಳ್ಳನನ್ನು ಹಿಡಿಯುವ ಕಾರ್ಯಾಚರಣೆ ರೋಚಕವಾಗಿತ್ತು ಕಳುವು ಮಾಡಲು ಯತ್ನದ ಸುಳಿವು ಸಿಗುತ್ತಿದ್ದಂತೆ ಪರಸ್ಪರ ಫೋನ್ ಕರೆ ಮಾಡಿಕೊಂಡು ಅಪಾರ್ಟ್‌ಮೆಂಟ್ ನ ನಿವಾಸಿಗಳೆಲ್ಲಾ ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಹಿಡಿದಿದ್ದಾರೆ ನಗರ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಾರಾಗೃಹಕ್ಕೆ ಕಳುಹಿಸಲಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...