Home Latest News ಪಾಕಿಸ್ತಾನದ ಮೇಲೆ ಯುದ್ಧ ಗೆದ್ದ ವಿಜಯ ದಿವಸ್ ಅಚರಿಸದ ಯೋಧರು
Latest News

ಪಾಕಿಸ್ತಾನದ ಮೇಲೆ ಯುದ್ಧ ಗೆದ್ದ ವಿಜಯ ದಿವಸ್ ಅಚರಿಸದ ಯೋಧರು

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ವಿಜಯ ದಿವಸ್ ಆಚರಣೆ ಮಾಡಲಾಯಿತು.1971, ಡಿಸೆಂಬರ್ 16ರಂದು ಭಾರತ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಗೆಲುವು ಸಾಧಿಸಿದ ಸಂಭ್ರಮಕ್ಕೆ ಅಂದಿನಿಂದ ಈ ದಿನವನ್ನು ಇಡೀ ದೇಶವೇ ಹೆಮ್ಮೆಯ ದಿನವಾಗಿ ಸ್ಮರಿಸುತ್ತಿದ್ದು. ಯುದ್ಧದ ಗೆಲುವಿನ ದಿನವನ್ನು ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಗೆಲುವಿನ ಸವಿ ನೆನಪಿಗಾಗಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಮಾಜಿ ಸೈನಿಕರು ಸಂಭ್ರಮಾಚರಣೆ ನಡೆಸಿದರು.

ಪಾಕಿಸ್ತಾನ ವಿರುದ್ಧದದ ಗೆಲುವನ್ನು ದೇಶ ಮಹತ್ವದ ದಿನವನ್ನಾಗಿ ನೋಡುತ್ತಾ ಬಂದಿದೆ. ಪ್ರತಿ ವರ್ಷ ಜುಲೈ 26ರಂದು ʼಕಾರ್ಗಿಲ್ ವಿಜಯ ದಿನʼ ವನ್ನು ಸಹ 1999ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ಗೌರವಾರ್ಥವಾಗಿ ಆಚರಿಸಲಾಗುತ್ತದೆ. ಹಾಗೇ ಡಿಸೆಂಬರ್ 16ರಂದು ಕೂಡ ಪಾಕಿಸ್ತಾನದ ವಿರುದ್ಧದ ಗೆಲುವನ್ನು ವಿಜಯ್‌ ದಿವಸ್‌ ಎಂದು ಆಚರಿಸುತ್ತಾ ಬರಲಾಗಿದೆ. ಈ ಒಂದು ದಿನವು ಭಾರತೀಯ ಇತಿಹಾಸದಲ್ಲಿ ಅತ್ಯುನ್ನತ ಘಟ್ಟವಾಗಿದ್ದು, ದೇಶವು ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಮೂಲಕ ವಿಜಯ ದಿವಸ್‌ ಅನ್ನು ಸಂಭ್ರಮಿಸುತ್ತದೆ.

 

 

 

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...