Home Political News ವಿಜಯೇಂದ್ರ ವಿರುದ್ಧ ಸಿದ್ದರಾಮಯ್ಯ ಆರೋಪ ಸುಳ್ಳು : ಕಲ್ಮರಡಪ್ಪ
Political News

ವಿಜಯೇಂದ್ರ ವಿರುದ್ಧ ಸಿದ್ದರಾಮಯ್ಯ ಆರೋಪ ಸುಳ್ಳು : ಕಲ್ಮರಡಪ್ಪ

Share
Share

ಚಿಕ್ಕಮಗಳೂರು : ಅನ್ವರ್ ಮಾಣಿಪ್ಪಾಡಿ ಹೇಳಿಕೆ ಸೇರಿದಂತೆ ರಾಜ್ಯದ ಮುಡಾ ಹಗರಣ, ಕೋವಿಡ್ ವಾಲ್ಮೀಕಿ ಅಬಕಾರಿ ಎಲ್ಲವನ್ನೂ ಸಿಬಿಐ ತನಿಖೆಗೆ ವಹಿಸಿ ಅವಾಗ ಎಲ್ಲವೂ ದೂದ್ ಕಾ ದೂದ್ ಪಾನಿ ಕಾ ಪಾನಿ ಆಗುತ್ತದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್ ಸಿ ಕಲ್ಮರಡಪ್ಪ ಸವಾಲು ಹಾಕಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಿಯಾಂಕ ಖರ್ಗೆ ವಕ್ಫ್ ವಿಚಾರದಲ್ಲಿ ಸುಳ್ಳು ಆರೋಪ ಮಾಡುತ್ತಿದ್ದು, ಅನ್ವರ್ ಮಾಣಿಪ್ಪಾಡಿ ಹೇಳಿಕೆ ಹಾಗೂ ವರದಿಯನ್ನು ಕೂಡಲೇ ಸಿಬಿಐಗೆ ವಹಿಸಿ ಎಂದು ಕಲ್ಮರಡಪ್ಪ ಆಗ್ರಹಿಸಿದ್ದಾರೆ. ಎಲ್ಲವನ್ನು ಸಿಬಿಐಗೆ ವಹಿಸಿ. ಇಲ್ಲದಿದ್ದರೆ ನಿಮ್ಮನ್ನು ಪುಕ್ಕಲು ಮುಖ್ಯಮಂತ್ರಿ ಎಂದು ಕರೆಯ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಜನತೆಯ ತೆರಿಗೆ ಹಣವನ್ನು ವ್ಯರ್ಥ ಮಾಡಲು ಸದನವನ್ನು ಕರೆದಿದ್ದೀರಿ ಕರ್ನಾಟಕದಕ್ಕೆ ನಿಮ್ಮ ಕೊಡುಗೆ ಶೂನ್ಯ, ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಬಳಸದೆ ಸದನದಲ್ಲಿ ವ್ಯರ್ಥ ಆರೋಪಗಳನ್ನ ಮಾಡುವ ಮೂಲಕ ಕಲಾಪವನ್ನು ಹಾಳು ಮಾಡುತ್ತಿದ್ದೀರಿ ಎಂದು ಆರೋಪಿಸಿದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡದೆ ಜನರ ಗಮನವನ್ನು ಬೇರೆ ಸೆಳೆಯಲು ವಕ್ಫ್ ವಿಷಯವನ್ನು ಮುಂದಿಟ್ಟುಕೊಂಡು ನೀವು ಚರ್ಚಿಸುತ್ತಿದ್ದೀರಿ…?. ಅನ್ವರ್ ಮಾಣಿಪ್ಪಾಡಿಗೆ ಬಿ.ವೈ ವಿಜಯೇಂದ್ರ ಏಕೆ ಆಮಿಷ ಒಡ್ಡುತ್ತಾರೆ..?. ಪ್ರಕರಣದಲ್ಲಿ ಅವರ ಪಾತ್ರ ಏನಿದೆ..?. ಕಾಂಗ್ರೆಸಿಗರು ವಕ್ಫ್ ಆಸ್ತಿ ಕಬಳಿಸಿದರೆ, ವಿಜಯೇಂದ್ರ ಏಕೆ ಆಫರ್ ಮಾಡುತ್ತಾರೆ. ಎಂದು ಕಲ್ಮರಡಪ್ಪ ಹೇಳಿದರು.

ಇದೇ ವೇಳೆ ಮಾತನಾಡಿದ ಅವರು ಅನ್ವರ್ ಮಾಣಿಪ್ಪಾಡಿ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಅವರ ಬಗ್ಗೆ ನಮ್ಮ ಕೇಂದ್ರದ ವರಿಷ್ಠರು ಚರ್ಚೆ ಮಾಡುತ್ತಾರೆ ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳಲಾರೆ, ಕೆಲವು ಕಠಿಣ ಕ್ರಮಗಳನ್ನು ನಾವು ತೆಗೆದು ಕೊಳ್ಳಬೇಕಾಗುತ್ತದೆ ಎಂದರು

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...