Home Crime News ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುರ ಆರೋಪ : ಶಿಕ್ಷಕ ಬಂಧನ
Crime News

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುರ ಆರೋಪ : ಶಿಕ್ಷಕ ಬಂಧನ

Share
Share

ಚಿಕ್ಕಮಗಳೂರು : ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಹ ಶಿಕ್ಷಕ ಒಬ್ಬರನ್ನು ಬಂಧಿಸಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಶಾಲೆಯ ಸಹ ಶಿಕ್ಷಕ ಚಂದ್ರ ಶೆಟ್ಟಿ ಬಂಧಿತ ಶಿಕ್ಷಕನಾಗಿದ್ದು, ಈ ಹಿಂದೆಯೂ ಗುಬ್ಬಿಹಳ್ಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಶಿಕ್ಷಕನಾಗಿದ್ದಾಗಲೂ ಇದೇ ರೀತಿಯ ಕಿರುಕುಳ ನೀಡಿದ ಆರೋಪ ಇದೇ ಶಿಕ್ಷಕನ ಮೇಲೆ ಕೇಳಿ ಬಂದಿತ್ತು.

ಗುಬ್ಬಿಹಳ್ಳಿಯಲ್ಲಿ ಪೋಷಕರು ಈತನ ಕೃತ್ಯದಿಂದಾಗಿ ಬೇಸತ್ತು ಧರ್ಮದೇಟು ನೀಡಿದ ಘಟನೆಯೂ ನಡೆದಿತ್ತು, ಆ ವೇಳೆ ದಂಡ ಕಟ್ಟಿ ಈ ಹಿಂದೆ ಬಚಾವಾಗಿದ್ದ ಈತ ಈ ಬಾರಿ ಬಂಧನಕ್ಕೆ ಒಳಗಾಗಿದ್ದಾನೆ.

ಹಿರೇಗೌಜ ಶಾಲೆಯ 13ಕ್ಕೂ ಹೆಚ್ಚು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರೆಲ್ಲರೂ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಜೈಲಿನಲ್ಲಿರುವ ಶಿಕ್ಷಕ ಚಂದ್ರ ಶೆಟ್ಟಿಯನ್ನು ಶಿಕ್ಷಣ ಇಲಾಖೆ ಅಮಾನತ್ತು ಗೊಳಿಸಿದೆ. ಈ ನಡುವೆ ಇವನಿಗೆ ಎಂಎಲ್ಸಿ ಒಬ್ಬರ ಕೃಪ ಕಟಾಕ್ಷ ಇದೆ ಎಂದು ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...