Home Crime News ಆಂಬುಲೆನ್ಸ್ ನಲ್ಲಿ ಕಾಪರ್ ಕಳ್ಳ ಸಾಗಾಟ : ಇಬ್ಬರು ಆರೋಪಿಗಳ ಬಂಧನ
Crime News

ಆಂಬುಲೆನ್ಸ್ ನಲ್ಲಿ ಕಾಪರ್ ಕಳ್ಳ ಸಾಗಾಟ : ಇಬ್ಬರು ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಆಂಬುಲೆನ್ಸ್ ನಲ್ಲಿ ಕೋಟ್ಯಂತರ ಮೌಲ್ಯದ ತಾಮ್ರ ಸಾಗಿಸುತ್ತಿದ್ದ ಖತರ್ನಾಕ್ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಗುಜುರಿ ಅಂಗಡಿಗಳಿಂದ ಬೆಂಗಳೂರು ಸೇರಿದಂತೆ ಬೇರೆ ಕಡೆಗಳಿಗೆ ಅಕ್ರಮವಾಗಿ ರಾಶಿ ರಾಶಿ ತಾಮ್ರವನ್ನು ಕೊಂಡೊಯ್ದು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಖದೀಮ ಜುನೇದ್ ಹಾಗೂ ಹೇಮಂತ್ ಸೇರಿದಂತೆ ಮೂವರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಆಂಬುಲೆನ್ಸ್ ವಶಪಡಿಸಿಕೊಳ್ಳಲಾಗಿದ್ದು, ಕೋಟ್ಯಂತರ ಮೌಲ್ಯದ ತಾಮ್ರವನ್ನು ವಶಕ್ಕೆ ಕಳೆದ ಡಿಸೆಂಬರ್ 13ರಂದು ನಡೆದ ದತ್ತ ಜಯಂತಿ ಶೋಭಾ ಯಾತ್ರೆಯ ವೇಳೆ ರೋಗಿ ಇಲ್ಲದೆ ಸಾವಿರಾರು ಜನರ ನಡುವೆ ಸೈರನ್ ಬಳಸಿ ಸಾಗಿದ ಅಂಬುಲೆನ್ಸ್ ವಿಡಿಯೋ ವೈರಲ್ ಆಗಿತ್ತು. ಅದೇ ಆಂಬುಲೆನ್ಸ್ ನಲ್ಲಿ ಇದೀಗ ತಾಮ್ರ ಸಾಗಾಟ ಪ್ರಕರಣ ಬೆಳಕಿಗೆ ಬಂದಿದ್ದು, ಸಾಕಷ್ಟು ಅನುಮಾನಗಳಿಗೂ ಕಾರಣವಾಗಿದೆ.

ಈ ನಡುವೆ ಪೊಲೀಸರ ಮೇಲೆ ಗುಮಾನಿ ವ್ಯಕ್ತವಾಗಿದ್ದು, ಕಾಪರ್ ಸಾಗಾಣಿ ದಂಧೆಯಲ್ಲಿ ಭಾಗಿಯಾಗಿರುವ ಶಂಕೆಯೂ ವ್ಯಕ್ತವಾಗಿದೆ. ಈ ಕುರಿತು ಠಾಣೆಯ ತುಂಬಾ ಗುಸು ಗುಸು ಚರ್ಚೆಗಳು ನಡೆದಿದ್ದು, ಯಾರು ಈ ಅಕ್ರಮದಲ್ಲಿ ಯಾರು ಕೈಜೋಡಿಸಿದ್ದಾರೆ ಅವರ ವಿರುದ್ಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಕ್ರಮ ಕೈಗೊಳ್ಳುವರೇ..?. ಕಾದು ನೋಡಬೇಕಿದೆ….

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...