Home Latest News ಸಿ.ಟಿ.ರವಿ ಮನೆಗೆ ಮುತ್ತಿಗೆ ವೇಳೆ ಹೈಡ್ರಾಮ : ಕೈ ಕಾರ್ಯಕರ್ತನ ಮೇಲೆ ಹಲ್ಲೆ
Latest News

ಸಿ.ಟಿ.ರವಿ ಮನೆಗೆ ಮುತ್ತಿಗೆ ವೇಳೆ ಹೈಡ್ರಾಮ : ಕೈ ಕಾರ್ಯಕರ್ತನ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು : ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಸಿ.ಟಿ ರವಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ತೆರಳುವ ವೇಳೆ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಾರೀ ಹೈ ಡ್ರಾಮವೇ ನಡೆದಿದೆ. ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಘಟನೆ ತಲುಪಿದ್ದು ಕೆಆರ್ ಎಸ್ ಆಸ್ಪತ್ರೆ ಬಳಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ನಗರಸಭೆ ಪ್ರತಿಪಕ್ಷ ನಾಯಕ ಮುನೀರ್ ಅಹ್ಮದ್ ಗೆ ಕಾಲಿನಿಂದ ಒದ್ದು ಹಲ್ಲೆಗೆ ಯತ್ನಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಬಸವನಹಳ್ಳಿ ಮುಖ್ಯ ರಸ್ತೆಯ ಅರಳಿಮರದಿಂದ ಬಳಿಯಿಂದ ಸಿ.ಟಿ ರವಿ ಮನೆಯತ್ತ ಘೋಷಣೆ ಕೂಗುತ್ತಾ ತೆರಳುತ್ತಾರೆ ಈ ವೇಳೆ ಉಮೇಶ್ ಕ್ಯಾಂಟೀನ್ ಬಳಿ ಪರಸ್ಪರ ಎದುರಾಗಿ ಎರಡೂ ಕಡೆಯವರು ಘೋಷಣೆ ಕೂಗುತ್ತಾರೆ. ಪೊಲೀಸರು ಕಾರ್ಯಕರ್ತರನ್ನು ತಡೆಯಲು ತೀವ್ರ ಹರಸಾಹಸ ಪಡುತ್ತಾರೆ.

ಕೊನೆಗೆ ಕಾಂಗ್ರೆಸ್ ಕಾರ್ಯಕರ್ತರನ್ನ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ, ಸ್ಥಳಕ್ಕೆ ಆಗಮಿಸಿದ ಎಸ್ಪಿ ವಿಕ್ರಮ್ ಅಮಟೆ ಎರಡೂ ಪಕ್ಷಗಳ ಮುಖಂಡನ್ನು ಸಮಾಧಾನ ಪಡಿಸುತ್ತಾರೆ, ನಂತರ ಸಿ.ಟಿ ರವಿ ಮನೆ ಬಳಿ ಗಂಟೆಗಳ ಕಾಲ ಮೊಕ್ಕಾಂ ಹೂಡುತ್ತಾರೆ. ಸದ್ಯ ರವಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಈ ನಡುವೆ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಕೆಎಸ್ಆರ್ ಪಿ ತುಕುಡಿಯನ್ನು ನಿಯೋಜಿಸಲಾಗಿದೆ ಮತ್ತೆ ಪರ ವಿರೋಧ ಪ್ರತಿಭಟನೆ ಗಳು ನಡೆಯುವ ಸಾಧ್ಯತೆ ಇರುವ ಇದ್ದು ಹದ್ದಿನ ಕಣ್ಣನ್ನು ಪೊಲೀಸರು ಇಟ್ಟಿದ್ದು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...