Home Political News ಚಿಕ್ಕಮಗಳೂರು ನಗರ ಬೂದಿ ಮುಚ್ಚಿದ ಕೆಂಡ : ಬೈಕ್ ಗೆ ಟೈರ್ ಗೆ ಬೆಂಕಿ
Political News

ಚಿಕ್ಕಮಗಳೂರು ನಗರ ಬೂದಿ ಮುಚ್ಚಿದ ಕೆಂಡ : ಬೈಕ್ ಗೆ ಟೈರ್ ಗೆ ಬೆಂಕಿ

Share
Share

ಚಿಕ್ಕಮಗಳೂರು : ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ ವಿಕೋಪಕ್ಕೆ ತಿರುಗಿದೆ ನಗರದ ಕೆಲವೆಡೆ ಅಹಿತಕರ ಘಟನೆಗಳು ನಡೆದಿದ್ದು. ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ನಗರದ ಹೊರವಲಯದ ರಾಂಪುರ ಸರ್ಕಲ್ ನಲ್ಲಿ ಬೈಕ್ ಗೆ ಬಿಜೆಪಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ. ಮತ್ತೊಂದೆಡೆ ನಗರದ ಎಂ.ಜಿ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ ಈ ವೇಳೆ ವರ್ತಕರೊಬ್ಬರು ಅಂಗಡಿ ಮುಚ್ಚಲು ವಿರೋಧ ವ್ಯಕ್ತಪಡಿಸಿದ್ದಾರೆ. ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ನಗರದ ವಿವಿಧೆಡೆ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ನಗರದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಕಾರ್ಯಕರ್ತರು ಮುಖಕ್ಕೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಿ.ಟಿ ರವಿ ಭಾವಚಿತ್ರವನ್ನು ಹಿಡಿದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ, ನಗರದ ಆಜಾದ್ ಪಾರ್ಕ್ ನ ಮಯೂರ ಹೋಟೆಲ್ ಬಳಿ ಘಟನೆ ನಡೆದಿದ್ದು,

ಮುಖಾಮುಖಿಯಾದ ಎರಡೂ ಕಡೆಯ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಆಜಾದ್ ವೃತ್ತದಲ್ಲಿ ಸಿ.ಟಿ ರವಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೈ ಪಡೆ
ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ವೇಳೆ ಸಿ.ಟಿ ರವಿ ವಿರುದ್ಧ ಅವಾಚ್ಯ ಪದ ಬಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವ ಮೋರ್ಚಾ ಕಾರ್ಯದರ್ಶಿ ಸಚಿನ್ ಕುಮಾರ್ ಮೇಲೆ ಹಲ್ಲೆ ನಡೆದಿದೆ. ಮನಸ್ಸೊ ಇಚ್ಚೆ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದರು. ಅಟ್ಟಾಡಿಸಿಕೊಂಡು ಹೋಗಿ ಕಾಂಗ್ರೆಸಿಗರು ಕಾರ್ಯಕರ್ತರು ಹಲ್ಲೆ ನಡೆಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...