Home Political News ಸಿ.ಟಿ ರವಿ ಹೇಳಿಕೆ ಚಿಕ್ಕಮಗಳೂರು ಜನರಿಗೆ ಅವಮಾನ : ವೀರಶೈವ ಮುಖಂಡ ರೇಣುಕಾರಾಧ್ಯ
Political News

ಸಿ.ಟಿ ರವಿ ಹೇಳಿಕೆ ಚಿಕ್ಕಮಗಳೂರು ಜನರಿಗೆ ಅವಮಾನ : ವೀರಶೈವ ಮುಖಂಡ ರೇಣುಕಾರಾಧ್ಯ

Share
Share

ಚಿಕ್ಕಮಗಳೂರು : ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಡಿರುವ ಹೇಳಿಕೆಯಿಂದಾಗಿ ಸಮುದಾಯದ ಜನರ ಭಾವನೆಗಳಿಗೆ ಭಾರೀ ನೋವುಂಟಾಗಿದೆ. ಸಮುದಾಯದ ನಾಯಕಿ ಬಗ್ಗೆ ಸಿ.ಟಿ.ರವಿ ಆಡಿರುವ ಮಾತಿಗೆ ತಕ್ಕ ಸಾಕ್ಷಿಯಾಗಲೇಬೇಕು, ವಿಧಾನ ಪರಿಷತ್ ಸಭಾಧ್ಯಕ್ಷರು ಸಿ.ಟಿ.ರವಿ ಅವರ ಸದಸ್ಯತ್ವವನ್ನು ಕೂಡಲೇ ರದ್ದು ಮಾಡಬೇಕು. ಬಿಜೆಪಿ ಹೈಕಮಾಂಡ್ ಸಿ.ಟಿ.ರವಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ತಾಲೂಕು ವೀರಶೈವ ಮಹಾಸಭಾ ಉಪಾಧ್ಯಕ್ಷ ಎಚ್.ಎಂ.ರೇಣುಕಾರಾಧ್ಯ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಶಾಸನ ಸಭೆಗಳ ಗೌರವಕ್ಕೆ ಕೆಲ ಶಾಸಕರಿಂದಾಗಿ ಧಕ್ಕೆ ಬರುತ್ತಿದೆ. ಜನರ ಸಮಸ್ಯೆಗಳು, ರಾಜ್ಯದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕಾದ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಸದನಗಳಲ್ಲಿ ಕೀಳುಮಟ್ಟದ ರಾಜಕೀಯ ನಡೆಗಳು ನಡೆಯುತ್ತಿರುವುದು ಜನರಲ್ಲಿ ರಾಜಕಾರಣಗಳ ಬಗ್ಗೆ ಅಸಹ್ಯ ಭಾವನೆ ಮೂಡಲು ಕಾರಣವಾಗುತ್ತಿದೆ. ಇತ್ತೀಚಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಮಾಜಿ ಶಾಸಕ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷೆ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿದ್ದಾರೆ. ಈ ಮೂಲಕ ಅವರು ಚಿಕ್ಕಮಗಳೂರು ಜಿಲ್ಲೆ ಹಾಗೂ ಕ್ಷೇತ್ರದ ಮತದಾರರ ಗೌರವಕ್ಕೂ ಮಸಿ ಬಳಿದಿದ್ದಾರೆ ಎಂದು ದೂರಿದರು.
ರಾಜಕೀಯ ಪಕ್ಷಗಳ ನಡುವೆ ವಾಗ್ವಾದ, ಚರ್ಚೆ, ಆರೋಪ, ಪ್ರತ್ಯಾಪರೋದ ಸಹಜ, ಇದು ರಾಜಕೀಯಲಕ್ಕೆ ಸೀಮಿತವಾಗಿದ್ದರೇ ಯಾರದ್ದೂ ತಕರಾರಿಲ್ಲ. ಆದರೆ ಸಮುದಾಯದ ನಾಯಕಿಯಾಗಿರುವ ಮಹಿಳೆಯನ್ನು ಸಾರ್ವಜನಿಕವಾಗಿ ತೇಜೋವಧೆ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದ ಅವರು, ಸಿ.ಟಿ.ರವಿ ಇಂತಹ ವಿವಾದ ಸೃಷ್ಟಿಸುವಂತಹ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ, ಈ ಹಿಂದೆ ಅವರು ವಿಧಾನಪರಿಷತ್‌ನಲ್ಲೇ ನಿತ್ಯ ಸುಮಂಗಲಿಯರು ಎಂಬ ಪದ ಬಳಕೆ ಮಾಡಿ ಮಹಿಳೆಯರಿಗೆ ಅವಮಾನ ಮಾಡಿದ್ದರು. ಮಾತೆತ್ತಿದರೇ ಹಿಂದುತ್ವ, ಹಿಂದೂ ಸಂಸ್ಕೃತಿ ಎನ್ನುವ ಸಿ.ಟಿ.ರವಿ ಅವರಿಗೆ ಆರೆಸೆಸ್, ಸಂಘಪರಿವಾರ ಕಲಿಸಿರುವ ಪಾಠ ಏನೆಂಬುದು ಅವರ ಮಾತಿನಿಂದ ಅರ್ಥವಾಗುತ್ತಿದೆ. ಹಿಂದುತ್ವದ ಹೆಸರಿನಲ್ಲಿ ಆರೆಸೆಸ್, ಬಿಜೆಪಿ, ಸಂಘಪರಿವಾರ ತಮ್ಮ ಕಾರ್ಯಕರ್ತರಿಗೆ ಇಂತಹ ಸಂಸ್ಕೃತಿಹೀನರನ್ನಾಗಿ ಬೆಳೆಸುತ್ತಿರುವುದು ವಿಪರ್ಯಾಸ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಪಕ್ಷದವರು ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಾಹುಲ್‌ಗಾಂಧಿ ಬಗ್ಗೆ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಲಕ್ಷಿö್ಮÃ ಹೆಬ್ಬಾಳ್ಕರ್, ಅಪಘಾತ ಮಾಡಿ ಇಬ್ಬರನ್ನು ಕೊಂದಿರುವ ನಿಮ್ಮನ್ನು ಕೊಲೆಗಡುಕರು ಎಂದು ಸಿ.ಟಿ.ರವಿಗೆ ತಿರುಗೇಟು ನೀಡಿದ್ದಾರೆ. ಇಷ್ಟಕ್ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡ ಸಿ.ಟಿ.ರವಿ, ಅವಾಚ್ಯ ಶಬ್ಧ ಬಳಿಸಿ ನಿಂದಿಸಿದ್ದಾರೆ. ವಿಧಾನ ಪರಿಷತ್‌ನಂತಹ ಚಿಂತಕರ ಛಾವಡಿ ಎಂಬ ಗೌರವಕ್ಕೆ ಪಾತ್ರವಾಗಿರುವ ವೇದಿಕೆಯಲ್ಲಿ ಸಿ.ಟಿ.ರವಿ ಇಂತಹ ಹೇಳಿಕೆ ನೀಡಿರುವುದು ಖಂಡಿನೀಯ, ಸಂಸ್ಕೃತಿ ಹೀನರಿಂದ ಮಾತ್ರ ಇಂತಹ ಹೇಳಿಕೆ ನೀಡಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿ.ಟಿ.ರವಿ ನೀಡಿದ್ದ ಈ ಹೇಳಿಕೆಯಿಂದಾಗಿ ಜೈಲು ಪಾಲಾಗಿದ್ದರು. ನ್ಯಾಯಾಲಯ ಸದ್ಯ ಅವರಿಗೆ ಜಾಮೀನು ನೀಡಿದೆ, ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರಬುದ್ಧತೆ ಮರೆತು, ಸಿ.ಟಿ.ರವಿ ಮಹಾನ್ ಸಾಧನೆ ಮಾಡಿ ಬಂದಿರುವAತೆ ಸಂಭ್ರಮಾಚರಣೆ ಮಾಡಿರುವುದು ನಾಚಿಗೇಡಿನ ಸಂಗತಿ ಎಂದ ಅವರು, ಸಿ.ಟಿ.ರವಿಗೆ ವಿಪ ಸದಸ್ಯನಾಗಿರಲು ಯಾವ ಅರ್ಹತೆಯೂ ಇಲ್ಲ. ಈಗಾಗಲೇ ಸಿ.ಟಿ.ರವಿ ನಡವಳಿಕೆಗೆ ಬೇಸತ್ತ ಜನ ಅವರಿಂದ ಅಧಿಕಾರ ಕಿತ್ತುಕೊಂಡಿದ್ದಾರೆ. ಇಂತಹ ನಡವಳಿಕೆಯನ್ನು ಅವರು ಮತ್ತೆ ಮುಂದುವರಿಸಿದರೇ ಸಿ.ಟಿ.ರವಿ ಹಾಗೂ ಬಿಜೆಪಿ ಪಕ್ಷಕ್ಕೆ ನಾಡಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಮುಖಂಡ ರವೀಶ್ ಮಾತನಾಡಿ, ಸಿ.ಟಿ.ರವಿ ಅವರಿಗೆ ತನ್ನ ನಾಲಗೆ ಮೇಲೆ ಹಿಡಿತವಿಲ್ಲ ಎಂಬುದು ಪದೇ ಪದೇ ರುಜುವಾತ ಮಾಡುತ್ತಿದ್ದಾರೆ, ಅವರಿಗೆ ಭಾಷೆಯ ಮೇಲೂ ಹಿಡಿತವಿಲ್ಲ. ಅವರೊಬ್ಬರ ಕನ್ನಡ ದ್ರೋಹಿ, ಹಿಂದೆ ನಿತ್ಯ ಸುಮಂಗಲಿಯರು ಎಂದು ಹೇಳಿದ್ದ ಈತ ಇಡೀ ನಾಡಿನ ಮಹಿಳೆಯರನ್ನು ಅವಮಾನಿಸಿದ್ದರು. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ವೀರಶೈವ ಮಹಾಸಭಾದ ಪದಾಧಿಕಾರಿ ಆಗಿದ್ದು, ಕೂಡಲೇ ಅವರು ಸಿ.ಟಿ.ರವಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ವಿಪ ಸಭಾಧ್ಯಕ್ಷರು ಸಿ.ಟಿ.ರವಿ ಸದಸ್ಯತ್ವವನ್ನು ರದ್ದು ಮಾಡಬೇಕು, ಬಿಜೆಪಿ ಪಕ್ಷದ ಮುಖಂಡರು ಇನ್ನಾದರೂ ಸಿ.ಟಿ.ರವಿಗೆ ಭಾಷೆಯೊಂದಿಗೆ ವಿವೇಕವನ್ನೂ ಕಲಿಸಬೇಕು ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...