Home Political News ಸಿ.ಟಿ ರವಿ ಡ್ರಾಮ ಮಾಸ್ಟರ್ ಹೇಳಿಕೆಗೆ ಪಲ್ಲವಿ ಸಿ.ಟಿ ರವಿ ತಿರುಗೇಟು
Political News

ಸಿ.ಟಿ ರವಿ ಡ್ರಾಮ ಮಾಸ್ಟರ್ ಹೇಳಿಕೆಗೆ ಪಲ್ಲವಿ ಸಿ.ಟಿ ರವಿ ತಿರುಗೇಟು

Share
Share

ಚಿಕ್ಕಮಗಳೂರು : ಸಿ.ಟಿ ರವಿ ಒಳ್ಳೆಯ ಡ್ರಾಮಾ ಮಾಸ್ಟರ್ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪಲ್ಲವಿ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಹಾಳಾಗಿರಲ್ಲ. ಡೀಪಾಗಿ ಒಂದು ಹೋಲ್ ಆಗಿದೆ, ಎರಡು ದಿನ ಬ್ಯಾಂಡೇಜ್ ಆಮೇಲೆ ತಲೆಗೆ ಔಷಧಿ ಹಾಕಬೇಕು. ಕೂದಲಿನ ಮೇಲೆ ಬ್ಯಾಂಡೇಜ್ ಸ್ಟಿಕರ್ ನಿಲ್ಲಲ್ಲ ಅಂತ ಈ ರೀತಿ ಬ್ಯಾಂಡೇಜ್ ಹಾಕಿದ್ದಾರೆ ಎಂದರು.

ಗಾಯ ಆಗಿಲ್ಲ ಅಂದ್ರೆ ಎಷ್ಟು ದಿನ ಅಂತ ನಾಟಕ ಮಾಡಲು ಆಗುತ್ತೆ, ಮ್ಯಾನ್ ಹ್ಯಾಂಡ್ಲಿಂಗ್ ಮಾಡಿ ಸುತ್ತಾಡಿಸಿರುವುದರಿಂದ ಅವರಿಗೆ ಜ್ವರ ಬಂದಿದೆ. ದಿನಾ ನಾಟಕ ಮಾಡೋರು ಅದೇ ರೀತಿ ಇರ್ತಾರೆ ಹೇಳೋರಿಗೇನು ಏನು ಬೇಕಾದರೂ ಹೇಳಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ತಿರುಗೇಟು ನೀಡಿದರು.

ಇದೇ ವೇಳೆ ಮಾತನಾಡಿದ ಅವರು ಸಿ.ಟಿ ರವಿಗೆ ಸಂಸ್ಕಾರ ಇಲ್ಲ ಅಂತ ನೀವು ಹೇಳಿದ್ದೀರಾ ಅಕ್ಕ ತಂಗಿ ಅಮ್ಮ ಹೆಂಡ್ತಿ ಇಲ್ಲ ಎಂಬ ಹೆಬ್ಬಾಳ್ಕರ್ ಹೇಳಿಕೆಗೆ ಅವರು, ಎಲ್ಲರೂ ಇದ್ದಾರೆ ಅಮ್ಮ ಇಲ್ಲದಿದ್ದರೆ ಭೂಮಿಗೆ ಬರೋದಾದ್ರು ಹೇಗೆ..?. ಸಿ.ಟಿ ರವಿಗೆ ಅವರದ್ದೇ ಆದ ಸಂಸ್ಕಾರವಿದೆ ಹಾಗಾಗಿ ಹೇಳೋದು ಲಕ್ಷ್ಮಿ ಅವರಿಗೆ ಹೇಳೋದು ರೂಢಿ ಅನ್ಸುತ್ತೆ. ಹೆಬ್ಬಾಳ್ಕರ್ ಅವರಿಗೆ ಒರಟುತನದ ಮಾತು ಅಭ್ಯಾಸ ಆಗಿ ಹೋಗಿದೆ ಸದನದ ಒಳಗೆ ನಡೆದಿದ್ದನ್ನು ನಮ್ಮವರವರೆಗೂ ಏಕೆ ತಂದ್ರು ಅರ್ಥ ಆಗ್ತಿಲ್ಲ. ರಾಜಕಾರಣಿ ಹೇಗಿರಬೇಕು ಅಂದ್ರೆ ನಾನು ಸಿ.ಟಿ ರವಿ ಅವರಿಂದ ಕಲಿತಿದ್ದೇನೆ. ತುಂಬಾ ಜನಕ್ಕೆ ಹೇಳ್ತೀನಿ ಸಿ.ಟಿ ರವಿ ಅವರ ಜೊತೆ ಇದ್ದರೆ ಊಟ ತಿಂಡಿ ಸಿಗಲ್ಲ ಅಂತ. ಬಿಪಿ ಶುಗರ್ ಇರೋರು ಅವರ ಜೊತೆ ಹೋಗಬೇಡಿ ಅಂತ ನಾನೇ ಹಲವರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...