Home Political News ಸಿ.ಟಿ ರವಿ ಡ್ರಾಮ ಮಾಸ್ಟರ್ ಹೇಳಿಕೆಗೆ ಪಲ್ಲವಿ ಸಿ.ಟಿ ರವಿ ತಿರುಗೇಟು
Political News

ಸಿ.ಟಿ ರವಿ ಡ್ರಾಮ ಮಾಸ್ಟರ್ ಹೇಳಿಕೆಗೆ ಪಲ್ಲವಿ ಸಿ.ಟಿ ರವಿ ತಿರುಗೇಟು

Share
Share

ಚಿಕ್ಕಮಗಳೂರು : ಸಿ.ಟಿ ರವಿ ಒಳ್ಳೆಯ ಡ್ರಾಮಾ ಮಾಸ್ಟರ್ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪಲ್ಲವಿ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಹಾಳಾಗಿರಲ್ಲ. ಡೀಪಾಗಿ ಒಂದು ಹೋಲ್ ಆಗಿದೆ, ಎರಡು ದಿನ ಬ್ಯಾಂಡೇಜ್ ಆಮೇಲೆ ತಲೆಗೆ ಔಷಧಿ ಹಾಕಬೇಕು. ಕೂದಲಿನ ಮೇಲೆ ಬ್ಯಾಂಡೇಜ್ ಸ್ಟಿಕರ್ ನಿಲ್ಲಲ್ಲ ಅಂತ ಈ ರೀತಿ ಬ್ಯಾಂಡೇಜ್ ಹಾಕಿದ್ದಾರೆ ಎಂದರು.

ಗಾಯ ಆಗಿಲ್ಲ ಅಂದ್ರೆ ಎಷ್ಟು ದಿನ ಅಂತ ನಾಟಕ ಮಾಡಲು ಆಗುತ್ತೆ, ಮ್ಯಾನ್ ಹ್ಯಾಂಡ್ಲಿಂಗ್ ಮಾಡಿ ಸುತ್ತಾಡಿಸಿರುವುದರಿಂದ ಅವರಿಗೆ ಜ್ವರ ಬಂದಿದೆ. ದಿನಾ ನಾಟಕ ಮಾಡೋರು ಅದೇ ರೀತಿ ಇರ್ತಾರೆ ಹೇಳೋರಿಗೇನು ಏನು ಬೇಕಾದರೂ ಹೇಳಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ತಿರುಗೇಟು ನೀಡಿದರು.

ಇದೇ ವೇಳೆ ಮಾತನಾಡಿದ ಅವರು ಸಿ.ಟಿ ರವಿಗೆ ಸಂಸ್ಕಾರ ಇಲ್ಲ ಅಂತ ನೀವು ಹೇಳಿದ್ದೀರಾ ಅಕ್ಕ ತಂಗಿ ಅಮ್ಮ ಹೆಂಡ್ತಿ ಇಲ್ಲ ಎಂಬ ಹೆಬ್ಬಾಳ್ಕರ್ ಹೇಳಿಕೆಗೆ ಅವರು, ಎಲ್ಲರೂ ಇದ್ದಾರೆ ಅಮ್ಮ ಇಲ್ಲದಿದ್ದರೆ ಭೂಮಿಗೆ ಬರೋದಾದ್ರು ಹೇಗೆ..?. ಸಿ.ಟಿ ರವಿಗೆ ಅವರದ್ದೇ ಆದ ಸಂಸ್ಕಾರವಿದೆ ಹಾಗಾಗಿ ಹೇಳೋದು ಲಕ್ಷ್ಮಿ ಅವರಿಗೆ ಹೇಳೋದು ರೂಢಿ ಅನ್ಸುತ್ತೆ. ಹೆಬ್ಬಾಳ್ಕರ್ ಅವರಿಗೆ ಒರಟುತನದ ಮಾತು ಅಭ್ಯಾಸ ಆಗಿ ಹೋಗಿದೆ ಸದನದ ಒಳಗೆ ನಡೆದಿದ್ದನ್ನು ನಮ್ಮವರವರೆಗೂ ಏಕೆ ತಂದ್ರು ಅರ್ಥ ಆಗ್ತಿಲ್ಲ. ರಾಜಕಾರಣಿ ಹೇಗಿರಬೇಕು ಅಂದ್ರೆ ನಾನು ಸಿ.ಟಿ ರವಿ ಅವರಿಂದ ಕಲಿತಿದ್ದೇನೆ. ತುಂಬಾ ಜನಕ್ಕೆ ಹೇಳ್ತೀನಿ ಸಿ.ಟಿ ರವಿ ಅವರ ಜೊತೆ ಇದ್ದರೆ ಊಟ ತಿಂಡಿ ಸಿಗಲ್ಲ ಅಂತ. ಬಿಪಿ ಶುಗರ್ ಇರೋರು ಅವರ ಜೊತೆ ಹೋಗಬೇಡಿ ಅಂತ ನಾನೇ ಹಲವರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...