Home Crime News ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ
Crime News

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ

Share
Share

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂಡಿಗೆರೆ ಮೇಗಲಪೇಟೆಯ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಛೇರಿ ಸುಟ್ಟು ಭಸ್ಮವಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಕಟ್ಟಡದಿಂದ ಹೊಗೆ ಬರುವುದನ್ನು ಕಂಡ ಅಕ್ಕಪಕ್ಕದವರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ನಿರತರಾದರು. ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.

ಬೆಂಕಿ ಇಂದಾಗಿ ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ. ಕೆನರಾ ಬ್ಯಾಂಕ್ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.

ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ...

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...