Home Political News ರಾಜ್ಯ ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ : ಸಿ.ಟಿ ರವಿ ಆಕ್ರೋಶ
Political News

ರಾಜ್ಯ ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ : ಸಿ.ಟಿ ರವಿ ಆಕ್ರೋಶ

Share
Share

ಚಿಕ್ಕಮಗಳೂರು : ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಯಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ ಮುಂದಿನ ದಿನಗಳಲ್ಲಿ ಆಣೆ ಪ್ರಮಾಣಕ್ಕೆ ಧರ್ಮಸ್ಥಳಕ್ಕೂ ಹೋಗುತ್ತೇನೆ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗಿ ಹರಕೆ ತೀರಿಸುತ್ತೇನೆ ಎಂದು ಸಿ.ಟಿ ರವಿ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಡೆದ ಘಟನೆಯ ವೇಳೆ ಹಾಗೂ ಸಿಸಿಟಿವಿ ವಿಡಿಯೋ ಎಲ್ಲಾ ಇದೆ. ವಿಡಿಯೋ ಮಾಡಿದವರು ಯಾರು ಅಪರಿಚಿತರಲ್ಲ, ಎಲ್ಲರೂ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಅವರ ಜೊತೆ ಇದ್ದವರೆ ಹಲ್ಲೆ ಮಾಡಿದ್ದು, ನಾನು ಕಳೆದ ಡಿಸೆಂಬರ್ 19ರ ದಿನವೇ ದೂರು ನೀಡಿದ್ದೇನೆ ಈವರೆಗೂ ಎಫ್ಐಆರ್ ಆಗಿಲ್ಲ ಅಂದರೆ ಕಮಿಷನರ್ ಅಮಾನತ್ತಾಗಬೇಕು. ಸೆಕ್ಷನ್ 135 (a) ಶಾಸಕರಿಗೆ ವಿಶೇಷ ಸವಲತ್ತು ಇದೆ ಆದರೆ ಯಾವುದೇ ನೋಟಿಸ್ ಕೊಡದೆ ಬೆಳಗಾವಿ ಧಾರವಾಡ ಹುಬ್ಬಳ್ಳಿ ಸೇರಿದಂತೆ ಸುಮಾರು ನಾಲ್ಕು ನೂರು ಕಿಲೋಮೀಟರ್ ನನ್ನನ್ನು ಸುಖ ಸುಮ್ಮನೆ ಸುತ್ತಿಸಿದ್ರು. ಊಟ ನೀರು ಚಿಕಿತ್ಸೆ ಕೊಡದೆ ಚಿತ್ರಹಿಂಸೆ ನೀಡಿದರು ಎಂದರು.

ಇದೆ ವೇಳೆ ಬೆಳಗಾವಿಯ ಖಾನಾಪುರ ಸಿಪಿಐ ಅಮಾನತ್ತು ಹಿನ್ನೆಲೆ ಮಾತನಾಡಿದ ಅವರು ಅಮಾನತ್ತು ಆಗಿರುವ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಅಮಾನತ್ತು ಮಾಡಬೇಕಾಗಿರೋದು ಶಾರೀರಿಕ ಹಾಗೂ ಮಾನಸಿಕ ದೌರ್ಜನ್ಯ ಮಾಡಿದವರನ್ನು, ಪೊಲೀಸ್ ಠಾಣೆಯಲ್ಲಿ ಯಾವುದೇ ಬಿಜೆಪಿಯ ಸಭೆ ನಡೆದಿಲ್ಲ ಘಟನೆಯ ಬಳಿಕ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕರು ಹಾಗೂ ಮುಖಂಡರು ಇದ್ದರು. ಅಲ್ಲಿ ಕಮಿಷನರ್ ಹಾಗೂ ವಿಪಕ್ಷ ನಾಯಕರು ಶಾಸಕರು ಬಂದಿದ್ದರು. ಅದನ್ನ ಬಿಜೆಪಿ ಸಭೆ ಅನ್ನೋದು ಸರ್ಕಾರದ ಪೂರ್ವಗ್ರಹ ಪೀಡಿತ ಎಂದು ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವುದು ಸರಿಯಲ್ಲ, ನಿಜವಾಗಿಯೂ ಕ್ರಮ ಆಗಬೇಕಿರೋದು ಎಸ್.ಪಿ ಹಾಗೂ ಕಮಿಷನರ್ ಮೇಲೆ ಎಂದು ಖಂಡಿಸಿದರು.

ಸದನದಲ್ಲಿ ನಡೆದ ಘಟನೆ ಜಾತಿ ಸಂಘರ್ಷಕ್ಕೆ ತಿರುಗಿದೆ ಎಂಬ ಹೇಳಿಕೆಯ ವಿರುದ್ಧ ಮಾತನಾಡಿದ ಸಿ.ಟಿ ರವಿ ನಾನು ಹಿಂದುತ್ವವಾದಿ ಹಿಂದುತ್ವ ಕಾಗಿಯೇ ಬಂದವನು. ಜಾತಿ ಮಾಡಿಲ್ಲ ಮುಂದೆಯೂ ಮಾಡಲ್ಲ ಎಂದರು.

ಇದೇ ವೇಳೆ ಮಾತನಾಡಿದ ರವಿ ಶಾಸಕ ಮುನಿರತ್ನ ಮೇಲಿನ ಹಲ್ಲೆಗೆ ಸಿ.ಟಿ ರವಿ ಖಂಡನೆ ವ್ಯಕ್ತಪಡಿಸಿದ್ದು
ಇದೊಂದು ಗೂಂಡಾ ರಾಜ್ಯ ಎಂದು ಆಕ್ರೋಶಿಸಿದರು, ಮುನಿರತ್ನ ಅವರ ಮೇಲೆ ಹಲ್ಲೆ ಆಗಿರುವುದು ಕಂಡು ಬಂದಿದೆ. ಗೂಂಡ ರಾಜ್ಯವಾಗಿ ಮಾರ್ಪಾಡಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತುರ್ತು ಪರಿಸ್ಥಿತಿಯನ್ನೇ ಎದುರಿಸಿದ್ದೇನೆ ಈ ಗುಂಡಗಿರಿಗೆಲ್ಲ ಬಿಜೆಪಿ ಹಾಗೂ ನಾವು ಹೆದರುವುದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಳಿಕ ಮುನಿರತ್ನಾಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿ.ಟಿ ರವಿ, ನಾವೆಲ್ಲರೂ ನಿಮ್ಮ ಜೊತೆ ಇದ್ದೇವೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆತ್ಮಸ್ಥೈರ್ಯ ತುಂಬಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...