Home Crime News ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು
Crime News

ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು

Share
Share

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಮರಣ ಮೃದಂಗ ನಿಲ್ಲದಂತಾಗಿದೆ, ಜಮೀನಿನಲ್ಲಿ ವಿದ್ಯುತ್ ತಂತಿ ತಗಲಿ ಕಾಡಾನೆಯೊಂದು ದಾರುಣವಾಗಿ ಸಾವು ಕಂಡಿದೆ. ಜಮೀನಿನಲ್ಲಿ ಕೆಳಭಾಗಕ್ಕೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯಿಂದ ಈ ಅವಘಡ ನಡೆದಿದೆ.

ಆಹಾರ ಅರಿಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಸಾವನ್ನಪ್ಪಿದೆ, ವಿದ್ಯುತ್ ತಂತಿ ತಗಲಿ ಕಂದಕಕ್ಕೆ ಉರುಳಿ ಬಿದ್ದಿರುವ ಒಂಟಿ ಸಲಗ ಅಸುನೀಗಿದೆ, ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದರೂ ಕೂಡ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವೇ ಇರಲಿಲ್ಲ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾನವ ಕಾಡಾನೆಗಳ ಸಂಘರ್ಷ ತೀವ್ರಗೊಂಡಿದೆ, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವು ಕಾಣುತ್ತಿವೆ, ಜಮೀನಿನ ಕೆಲಸಕ್ಕೆ ತೆರಳಿದ ಶಿವಬಸಪ್ಪ ಆನೆಯ ದಾರುಣ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ, ಈ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಳ್ಳಿಯ ಉಡೆವಾ ಗ್ರಾಮದಲ್ಲಿ ನಡೆದಿದೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...