Home Latest News ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು
Latest News

ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು

Share
Share

ಚಿಕ್ಕಮಗಳೂರು : ಜಿಲ್ಲಾ ನೌಕರರ ಸಂಘದ ಚುನಾವಣೆಯ ಹಣಾಹಣಿಯಲ್ಲಿ ದೇವೇಂದ್ರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಗೆದ್ದರೂ ಎಂಎಲ್ಸಿ ಭೋಜೇಗೌಡರ ಹಠ ಸಾಧಿಸಿ ಅಮಾನತು ಮಾಡಿಸಿ ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ಸ್ಥಳ ನಿಯುಕ್ತಿಗೊಳಿಸಲಾಗಿತ್ತು.

ನಂತರ ಭೋಜೇಗೌಡರನ್ನು ಮನವೊಲಿಸಲು ಅಧಿವೇಶನದ ವೇಳೆ ಬೆಳಗಾವಿಗೆ ಹೋಗಿದ್ದ ದೇವೇಂದ್ರ ನಿರಾಶರಾಗಿ ಬಂದಿದ್ದರು.

ಇದೀಗ ದೇವೇಂದ್ರ ಅಮಾನತು ಆದೇಶ ರದ್ದುಪಡಿಸಿ ಅಲ್ದೂರು ಕಾಲೇಜ್ ಗೆ ಸ್ಥಳ ನಿಯುಕ್ತಿ ಗೊಳಿಸಲಾಗಿದೆ. ನಾಳೆ ರಾಜ್ಯದ ಸರ್ಕಾರಿ ನೌಕರರ ರಾಜ್ಯ ಅಧ್ಯಕ್ಷರು ಮತ್ತು ಖಜಾಂಚಿ ಸ್ಥಾನಕ್ಕೆ ಚುನಾವಾಣೆ ನಡೆಯಲಿದೆ. ಅದರಲ್ಲಿ ಯಾರಿಗೆ ದೇವೆಂದ್ರ ಟೀಂ ಮತ ಚಾಲಯಿಸುತ್ತಾರೆ ಎಂಬುದರ ದಿಕ್ಸೂಚಿಯ ಫಲವೇ ಅಮಾನತು ರದ್ದುಗೊಳಿಸಿರುವುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಅಮಾನತು ರದ್ದು ಮಾಡಿಸಲು ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ, ಶೃಂಗೇರಿಯ ಟಿ.ಡಿ.ರಾಜೇಗೌಡ ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್. ಹಾಗೂ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಕೃಷ್ಣೇಗೌಡರ ಪ್ರಭಾವದಿಂದಾಗಿ ದೇವೇಂದ್ರ ರಿವೋಕ್ ಆಗಿದ್ದಾರೆ ಎನ್ನಲಾಗುತ್ತಿದೆ ಆದರೆ ಭೋಜೇಗೌಡರ ಹಠ ಏನಾಯಿತು ಎಂಬುದು ಸದ್ಯ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ ಆಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...