Home Latest News ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು
Latest News

ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು

Share
Share

ಚಿಕ್ಕಮಗಳೂರು : ಜಿಲ್ಲಾ ನೌಕರರ ಸಂಘದ ಚುನಾವಣೆಯ ಹಣಾಹಣಿಯಲ್ಲಿ ದೇವೇಂದ್ರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಗೆದ್ದರೂ ಎಂಎಲ್ಸಿ ಭೋಜೇಗೌಡರ ಹಠ ಸಾಧಿಸಿ ಅಮಾನತು ಮಾಡಿಸಿ ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ಸ್ಥಳ ನಿಯುಕ್ತಿಗೊಳಿಸಲಾಗಿತ್ತು.

ನಂತರ ಭೋಜೇಗೌಡರನ್ನು ಮನವೊಲಿಸಲು ಅಧಿವೇಶನದ ವೇಳೆ ಬೆಳಗಾವಿಗೆ ಹೋಗಿದ್ದ ದೇವೇಂದ್ರ ನಿರಾಶರಾಗಿ ಬಂದಿದ್ದರು.

ಇದೀಗ ದೇವೇಂದ್ರ ಅಮಾನತು ಆದೇಶ ರದ್ದುಪಡಿಸಿ ಅಲ್ದೂರು ಕಾಲೇಜ್ ಗೆ ಸ್ಥಳ ನಿಯುಕ್ತಿ ಗೊಳಿಸಲಾಗಿದೆ. ನಾಳೆ ರಾಜ್ಯದ ಸರ್ಕಾರಿ ನೌಕರರ ರಾಜ್ಯ ಅಧ್ಯಕ್ಷರು ಮತ್ತು ಖಜಾಂಚಿ ಸ್ಥಾನಕ್ಕೆ ಚುನಾವಾಣೆ ನಡೆಯಲಿದೆ. ಅದರಲ್ಲಿ ಯಾರಿಗೆ ದೇವೆಂದ್ರ ಟೀಂ ಮತ ಚಾಲಯಿಸುತ್ತಾರೆ ಎಂಬುದರ ದಿಕ್ಸೂಚಿಯ ಫಲವೇ ಅಮಾನತು ರದ್ದುಗೊಳಿಸಿರುವುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಅಮಾನತು ರದ್ದು ಮಾಡಿಸಲು ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ, ಶೃಂಗೇರಿಯ ಟಿ.ಡಿ.ರಾಜೇಗೌಡ ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್. ಹಾಗೂ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಕೃಷ್ಣೇಗೌಡರ ಪ್ರಭಾವದಿಂದಾಗಿ ದೇವೇಂದ್ರ ರಿವೋಕ್ ಆಗಿದ್ದಾರೆ ಎನ್ನಲಾಗುತ್ತಿದೆ ಆದರೆ ಭೋಜೇಗೌಡರ ಹಠ ಏನಾಯಿತು ಎಂಬುದು ಸದ್ಯ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ ಆಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...