Home Political News ಭದ್ರತೆ ನೆಪದಲ್ಲಿ ಸಿ.ಟಿ ರವಿಗೆ ಡಬಲ್ ಎಸ್ಕಾರ್ಟ್ : ಪೊಲೀಸರ ಎಡವಟ್ಟು
Political News

ಭದ್ರತೆ ನೆಪದಲ್ಲಿ ಸಿ.ಟಿ ರವಿಗೆ ಡಬಲ್ ಎಸ್ಕಾರ್ಟ್ : ಪೊಲೀಸರ ಎಡವಟ್ಟು

Share
Share

ಚಿಕ್ಕಮಗಳೂರು : ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ನಡೆದ ಜಾಟಪಟಿಯಲ್ಲಿ ಅಶ್ಲೀಲ ಪದ ಪ್ರಯೋಗ ನಂತರ ನಡೆದ ನಾಟಕೀಯ ಬೆಳವಣಿಗೆಗಳು ಆರೋಪ ಪ್ರತ್ಯಾರೋಪಗಳ ಮಧ್ಯೆ ಸಿ.ಟಿ.ರವಿಯವರಿಗೆ ಪೊಲೀಸ್ ಭದ್ರತೆ ನೀಡಿರುವುದು, ಸೈರನ್ ಮೂಲಕ ಎಸ್ಕಾರ್ಟ್ ಅನ್ನು ಒದಗಿಸಿರುವುದಕ್ಕೆ ತೀವ್ರ ಚರ್ಚೆ ಆರಂಭವಾಗಿದೆ.

ಸಿ.ಟಿ.ರವಿ ಸೋಲಿಸಿದ ತಮ್ಮಯ್ಯ ವಾಹನ ಸಂಚರಿಸುವ ವೇಳೆ ಸಿ.ಟಿ. ರವಿ ಕಾರಿನ ಹಿಂದೆ ಮುಂದೆ ಪೊಲೀಸ್ ಜೀಪ್ ಜೊತೆಗೆ ಸೈರನ್ ಸೌಂಡ್ ಕೇಳಿ ಕೆರಳಿದ ಕಾಂಗ್ರೆಸ್ ಮುಖಂಡರು ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ ಈ. ವೇಳೆ ಮೇಲಾಧಿಕಾರಿಗಳ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಉತ್ತರ ಬಂದಿದೆ.

ಸಿ.ಟಿ.ರವಿ ಕುಳಿತರು ಸುದ್ದಿ ನಿಂತರು ಸುದ್ದಿ ಇನ್ನೂ ಸೈರನ್ ಸೌಂಡ್ ಹಾಕಿಕೊಂಡು ಓಡಾಡಿದರೆ ಸುದ್ದಿ ಆಗಲ್ವಾ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕಳೆದ ಎಂಟು ದಿನಗಳಿಂದ ಎಡಬಿಡದೆ ಎಲ್ಲೆಲ್ಲೂ ಸುದ್ದಿಯಾಗುತ್ತಿರುವಾಗ ಎಸ್ಕಾರ್ಟ್ ಬಗ್ಗೆ ಕಾಂಗ್ರೆಸ್ ನ ಶಾಸಕರಿಗೂ ಎಸ್ಕಾರ್ಟ್ ಜೊತೆಗೆ ಸೈರನ್ ಗ್ಯಾರಂಟಿ ಒದಗಿಸಿ ಎಂದು ಆಗ್ರಹಿಸಿದರು ಆಶ್ಚರ್ಯವಿಲ್ಲ.

ಅಭಿವೃದ್ಧಿ ದೃಷ್ಟಿಯಿಂದ ನಾವೆಲ್ಲರೂ ಒಂದಾಗಿದ್ದೇವೆ ಎಂದು ಹೇಳಿದ್ದ ಶಾಸಕ ತಮ್ಮಯ್ಯ ಈಗ ಸೈರನ್ ಸೌಂಡ್ ಗೆ ತಿರುಗಿ ಬಿದ್ದಿರುವುದು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಖಾರವಾಗಿ ಟೀಕಿಸಿರುವುದು ಎಲ್ಲವೂ ಸರಿಯಿಲ್ಲ ಎನ್ನುತ್ತಲೇ ಸರ್ಕಾರಿ ನೌಕರರ ಸಂಘದ ದೇವೇಂದ್ರ ಪರ ನಿಂತು ಬೋಜೇಗೌಡರ ವಿರುದ್ದ ಹೆಜ್ಜೆ ಇಟ್ಟಿರುವುದು ನೋಡಿದರೆ ಒಗ್ಗಟ್ಟಿನಲ್ಲಿ ಒಡುಕು ಉಂಟಾಗಿದೆ. ಅಭಿವೃದ್ಧಿ ವಿಚಾರಕ್ಕಿಂತ ಅಸ್ತಿತ್ವದ ವಿಚಾರ ಬಂದಾಗ ಎದುರಾಳಿಗಳ ಬಾಯಿ ಮುಚ್ಚಿಸುತ್ತಾರೆ ಎಂಬುದು ಸತ್ಯವಾದಂತಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...