Home Latest News ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ
Latest News

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ

Share
Share

ರಾಜ್ಯ ಸರ್ಕಾರಿ ನೌಕರರ ಸಂಘ ದ ರಾಜ್ಯ ಅಧ್ಯಕ್ಷ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
964 ಮತದಾರರು ಇದ್ದು ಬಿರುಸಿನಿಂದ ಚುನಾವಣೆಯಲ್ಲಿ ಮತ ಚಲಾಯಿಸಲಾಯಿತು.
ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಷಡಕ್ಷರಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಕೃಷ್ಣೇಗೌಡರು ಪ್ರಬಲವಾದ ಪೈಪೋಟಿ ನೀಡಿದರೂ ಷಡಕ್ಷರಿ 59 ಮತಗಳ ಅಂತರದಿಂದ ವಿಜಯ ಮಾಲೆ ತನ್ನದಾಗಿಸಿ ಕೊಂಡಿದ್ದಾರೆ.
ಖಜಾಂಚಿ ಸ್ಥಾನಕ್ಕೆ ಕೃಷ್ಣೇಗೌಡರ ಬಣದ ಶಿವರುದ್ರಯ್ಯ ಚುನಾಯಿತರಾದರೆ ಷಡಕ್ಷರಿ ಬಣದ ನಾಗರಾಜ್ ಆರ್ ಜುಮನ್ನನವರ್ ಪರಾಭವಗೊಂಡರು.
ಬೆಳಗ್ಗೆಯಿಂದ ನಡೆದ ಬಿರುಸಿನ ಮತದಾನ ನೋಡಿದರೆ ಯಾವ ಕಾರ್ಪೊರೇಟ್ ಎಲೆಕ್ಷನ್ ಮೀರಿಸುವಂತೆ ಇತ್ತು ಒಂದೊಂದು ಮತಕ್ಕೂ ರೇಟ್ ಫಿಕ್ಸ್ ಮಾಡಲಾಗಿತ್ತು ಎಂಬ ಮಾತುಗಳನ್ನು ನೌಕರರೇ ಮಾತನಾಡುತ್ತಿದ್ದರು.
ಕೃಷ್ಣೇಗೌಡರ ಪರ ಸರ್ಕಾರವೇ ಟೊಂಕಕಟ್ಟಿ ನಿಂತಿದ್ದು ಷಡಕ್ಷರಿಗೆ ಆತಂಕ ತದ್ದಿತ್ತು ಆದರೂ ಮಾಡಿದ ಕೆಲಸ ಕೈ ಹಿಡಿದಿದೆ ಎನ್ನನುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...