Home Crime News ಸರಣಿ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ
Crime News

ಸರಣಿ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ

Share
Share

ಚಿಕ್ಕಮಗಳೂರು: ಸರಣಿ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಖದೀಮರನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 18ರ ರಾತ್ರಿ ಬಾಳೆಹೊನ್ನೂರು ಪಟ್ಟಣದ ಮುಬಾರಕ್ ಹುಸೇನ್ ಎಂಬುವವರ ಅಂಗಡಿಯ ಬೀಗ ಮುರಿದು 20 ಸಾವಿರ ನಗದು ಎರಡು ದುಬಾರಿ ಮೌಲ್ಯದ ವಾಚ್ ಹಾಗೂ ಸಿಸಿ ಕ್ಯಾಮರದ ಡಿವಿಆರ್ ಅನ್ನು ಕಳ್ಳರು ಎಗರಿಸಿದ್ದರು. ಅಲ್ಲದೇ ಎದುರುಗಡೆ ಇದ್ದ ಕಲ್ಮಕ್ಕಿ ವೈನ್ ಶಾಪ್ ಬೀಗ ಒಡೆದು ಮೂರು ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕಳವು ಮಾಡಿ, ಮತ್ತೊಂದು ದಿನಸಿ ಅಂಗಡಿಯ ರೋಲಿಂಗ್ ಶೆಟರ್ ಮುರಿದು ಎರಡು ಸಾವಿರ ನಗದು ಎಗರಿಸಿ ಕಳ್ಳರು ಕೈಚಳಕ ತೋರಿದ್ದರು.

ಈ ಕುರಿತು ಅಂಗಡಿ ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಸಿಬ್ಬಂದಿಗಳು, ಚಿತ್ರದುರ್ಗ ಮೂಲದ ಕರುಣ ಹಾಗೂ ಹಸೈನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ 3.50 ಲಕ್ಷ ನಗದು, 4.10 ಲಕ್ಷ ಮೌಲ್ಯದ ವಸ್ತುಗಳು ಸೇರಿದಂತೆ ಮಾರುತಿ ಸ್ವಿಫ್ಟ್ ಕಾರನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ...

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...