Home Latest News ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ
Latest News

ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ

Share
Share

ಚಿಕ್ಕಮಗಳೂರು: ಕಾಫಿನಾಡಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗೌಡ್ತಿಯರ ಟೆನಿಸ್ ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಆಯೋಜಿಸಿದ್ದು ಒಕ್ಕಲಿಗ ಜನಾಂಗದ ಗೌಡ್ತಿ ಮಹಿಳೆಯರು ಅಖಾಡದಲ್ಲಿ ಬ್ಯಾಟ್ ಬೀಸಿ, ಬೌಲಿಂಗ್ ಮಾಡಿ ನಾವೇನು ಕಮ್ಮಿ ಎಂದು ಯುವಕರು ನಾಚಿಸುವಂತೆ ಆಟವಾಡುತ್ತಿದ್ದಾರೆ. ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಇಂದು ಮತ್ತೆ ನಾಳೆ ಗೌಡ್ತಿಯರ ಗೆಲುವಿನ ಕಾಳಗದ ಜಿದ್ದಾಜಿದ್ದಿನಲ್ಲಿ ನಾವಾ-ನೀವಾ ಎಂದು ಮಹಿಳೆಯರಿಗೆ ಮಹಿಳೆಯರೇ ತೊಳು ಏರಿಸಿದ್ದಾರೆ.

ರಾಜ್ಯ ಮಟ್ಟದ ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಿದ್ದು, ಕಾಫಿನಾಡ ಇತಿಹಾಸದಲ್ಲೇ ಮೊದಲ ಬಾರಿಗೆ ಗೌಡ್ತಿಯರಿಗಾಗೇ ಕ್ರಿಕೆಟ್ ಆಯೋಜನೆಗೊಂಡಿದೆ. ಈ ಟೂರ್ನಿ ರಾಜ್ಯ ಮಟ್ಟದ ಸ್ಪರ್ಧೆಯಾಗಿರೋದ್ರಿಂದ ರಾಜ್ಯದ ನಾನಾ ಭಾಗಗಳಿಂದಲೂ ಗೌಡ್ತಿಯರು ತಮ್ಮ ಕಲೆ ಪ್ರದರ್ಶನಕ್ಕೆ ಆಗಮಿಸಿದ್ದಾರೆ. ಸಾಮಾನ್ಯವಾಗಿ ಹುಡುಗರಿಗೆ ಕ್ರಿಕೆಟ್ ಟೂರ್ನಿ ಆಯೋಜನೆಯಾಗುತ್ತೆ. ಆದರೆ, ಒಕ್ಕಲಿಗ ಜನಾಂಗದವರೇ ಹೆಚ್ಚಿರೋ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಕ್ಕಲಿಗ ಜನಾಂಗದ ಗೌಡ್ತಿಯರಿಗಾಗೇ ಟೂರ್ನಿ ಆಯೋಜನೆಗೊಂಡಿದೆ.

ಈವರೆಗೂ ಮಹಿಳೆಯರಿಗೆ ಎಲ್ಲೂ ಟೂರ್ನಿಮೆಂಟ್ ಆಯೋಜಿಸರಲಿಲ್ಲ. ಹಾಗಾಗಿ, ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ ಅನ್ನೋದು ಆಯೋಜಕರ ಮಾತು. ಚಿಕ್ಕಮಗಳೂರು ಒಂದರಲ್ಲೇ ಆಟಗಾರರು ಸಿಗುವುದು ಕಷ್ಟ ಅಂತ ರಾಜ್ಯದ ನಾನಾ ಭಾಗಗಳಿಂದಲೂ ಆಟಗಾರ್ತಿಯರು ಬರುತ್ತಿದ್ದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದ ಗೌಡ್ತಿ ಮಹಿಳೆಯರು ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ ಮಿಂಚುತ್ತಿದ್ದಾರೆ. ಒಟ್ಟು ಎಂಟು ತಂಡಗಳು ಹೆಸರನ್ನ ನೊಂದಾಯಿಸಿಕೊಂಡಿದ್ದು, ಚಿಕ್ಕಮಗಳೂರಿನ ಐದು ತಂಡದ ಜೊತೆ ಬೆಂಗಳೂರು-ಮೈಸೂರು ಹಾಗೂ ಮಡಿಕೇರಿಯಿಂದಲೂ ತಂಡಗಳೂ ಭಾಗವಹಿಸಿವೆ. ಹುಡುಗಿಯರು-ಮಹಿಳೆಯರು ಇಬ್ಬರೂ ಸೇರೆ ತಂಡ ಮಾಡಿಕೊಂಡಿದ್ದು ಅಖಾಡದಲ್ಲಿ ಹುಡುಗರು ನಾಚಿಸುವಂತೆ ಬ್ಯಾಟಿಂಗ್-ಬೌಲಿಂಗ್ ಮಾಡ್ತಿದ್ದಾರೆ. ಮೊದಲ ಬಹುಮಾನ 1 ಲಕ್ಷ ಇದ್ರೆ, 2ನೇ ಬಹುಮಾನ 70 ಸಾವಿರ. 3ನೇ ಬಹುಮಾನ 50 ಸಾವಿರ ಮತ್ತು 4ನೇ ಬಹುಮಾನ 25 ಸಾವಿರ ಇದ್ದು, 1 ಲಕ್ಷದ ಗೆಲುವಿಗಾಗಿ ಮಹಿಳೆಯರು ಅಖಾಡದಲ್ಲಿ ಹೋರಾಡುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...