Home Latest News ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ
Latest News

ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ

Share
Share

ಚಿಕ್ಕಮಗಳೂರು: ಕಾಫಿನಾಡಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗೌಡ್ತಿಯರ ಟೆನಿಸ್ ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಆಯೋಜಿಸಿದ್ದು ಒಕ್ಕಲಿಗ ಜನಾಂಗದ ಗೌಡ್ತಿ ಮಹಿಳೆಯರು ಅಖಾಡದಲ್ಲಿ ಬ್ಯಾಟ್ ಬೀಸಿ, ಬೌಲಿಂಗ್ ಮಾಡಿ ನಾವೇನು ಕಮ್ಮಿ ಎಂದು ಯುವಕರು ನಾಚಿಸುವಂತೆ ಆಟವಾಡುತ್ತಿದ್ದಾರೆ. ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಇಂದು ಮತ್ತೆ ನಾಳೆ ಗೌಡ್ತಿಯರ ಗೆಲುವಿನ ಕಾಳಗದ ಜಿದ್ದಾಜಿದ್ದಿನಲ್ಲಿ ನಾವಾ-ನೀವಾ ಎಂದು ಮಹಿಳೆಯರಿಗೆ ಮಹಿಳೆಯರೇ ತೊಳು ಏರಿಸಿದ್ದಾರೆ.

ರಾಜ್ಯ ಮಟ್ಟದ ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಿದ್ದು, ಕಾಫಿನಾಡ ಇತಿಹಾಸದಲ್ಲೇ ಮೊದಲ ಬಾರಿಗೆ ಗೌಡ್ತಿಯರಿಗಾಗೇ ಕ್ರಿಕೆಟ್ ಆಯೋಜನೆಗೊಂಡಿದೆ. ಈ ಟೂರ್ನಿ ರಾಜ್ಯ ಮಟ್ಟದ ಸ್ಪರ್ಧೆಯಾಗಿರೋದ್ರಿಂದ ರಾಜ್ಯದ ನಾನಾ ಭಾಗಗಳಿಂದಲೂ ಗೌಡ್ತಿಯರು ತಮ್ಮ ಕಲೆ ಪ್ರದರ್ಶನಕ್ಕೆ ಆಗಮಿಸಿದ್ದಾರೆ. ಸಾಮಾನ್ಯವಾಗಿ ಹುಡುಗರಿಗೆ ಕ್ರಿಕೆಟ್ ಟೂರ್ನಿ ಆಯೋಜನೆಯಾಗುತ್ತೆ. ಆದರೆ, ಒಕ್ಕಲಿಗ ಜನಾಂಗದವರೇ ಹೆಚ್ಚಿರೋ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಕ್ಕಲಿಗ ಜನಾಂಗದ ಗೌಡ್ತಿಯರಿಗಾಗೇ ಟೂರ್ನಿ ಆಯೋಜನೆಗೊಂಡಿದೆ.

ಈವರೆಗೂ ಮಹಿಳೆಯರಿಗೆ ಎಲ್ಲೂ ಟೂರ್ನಿಮೆಂಟ್ ಆಯೋಜಿಸರಲಿಲ್ಲ. ಹಾಗಾಗಿ, ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ ಅನ್ನೋದು ಆಯೋಜಕರ ಮಾತು. ಚಿಕ್ಕಮಗಳೂರು ಒಂದರಲ್ಲೇ ಆಟಗಾರರು ಸಿಗುವುದು ಕಷ್ಟ ಅಂತ ರಾಜ್ಯದ ನಾನಾ ಭಾಗಗಳಿಂದಲೂ ಆಟಗಾರ್ತಿಯರು ಬರುತ್ತಿದ್ದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದ ಗೌಡ್ತಿ ಮಹಿಳೆಯರು ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ ಮಿಂಚುತ್ತಿದ್ದಾರೆ. ಒಟ್ಟು ಎಂಟು ತಂಡಗಳು ಹೆಸರನ್ನ ನೊಂದಾಯಿಸಿಕೊಂಡಿದ್ದು, ಚಿಕ್ಕಮಗಳೂರಿನ ಐದು ತಂಡದ ಜೊತೆ ಬೆಂಗಳೂರು-ಮೈಸೂರು ಹಾಗೂ ಮಡಿಕೇರಿಯಿಂದಲೂ ತಂಡಗಳೂ ಭಾಗವಹಿಸಿವೆ. ಹುಡುಗಿಯರು-ಮಹಿಳೆಯರು ಇಬ್ಬರೂ ಸೇರೆ ತಂಡ ಮಾಡಿಕೊಂಡಿದ್ದು ಅಖಾಡದಲ್ಲಿ ಹುಡುಗರು ನಾಚಿಸುವಂತೆ ಬ್ಯಾಟಿಂಗ್-ಬೌಲಿಂಗ್ ಮಾಡ್ತಿದ್ದಾರೆ. ಮೊದಲ ಬಹುಮಾನ 1 ಲಕ್ಷ ಇದ್ರೆ, 2ನೇ ಬಹುಮಾನ 70 ಸಾವಿರ. 3ನೇ ಬಹುಮಾನ 50 ಸಾವಿರ ಮತ್ತು 4ನೇ ಬಹುಮಾನ 25 ಸಾವಿರ ಇದ್ದು, 1 ಲಕ್ಷದ ಗೆಲುವಿಗಾಗಿ ಮಹಿಳೆಯರು ಅಖಾಡದಲ್ಲಿ ಹೋರಾಡುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...