Home Crime News ಅಕ್ರಮ ಗೋ ಸಾಗಾಟ : ಪೊಲೀಸರಿಗೆ ಹಿಡಿದು ಕೊಟ್ಟ ಹಿಂದು ಸಂಘಟನೆಗಳು
Crime News

ಅಕ್ರಮ ಗೋ ಸಾಗಾಟ : ಪೊಲೀಸರಿಗೆ ಹಿಡಿದು ಕೊಟ್ಟ ಹಿಂದು ಸಂಘಟನೆಗಳು

Share
Share

ಚಿಕ್ಕಮಗಳೂರು : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಹಿಂದು ಸಂಘಟನಾ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದು ರಕ್ಷಿಸಿರುವ ಘಟನೆ ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್‌ ನಲ್ಲಿ ನಡೆದಿದೆ.

ಏಜೆಂಟ್ ಒಬ್ಬನ ಮೂಲಕ ಸಾಗರದ ಕಸಾಯಿಖಾನೆಗೆ ಗೋವುಗಳನ್ನು ಬೇಗಾರಿನ ಹರಾವರಿ ಎಂಬ ಗ್ರಾಮದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದು ಗೋವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಗಳನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ವಾಹನವನ್ನು ಸೀಜ್ ಮಾಡಲಾಗಿದೆ ಹಾಗೂ ಗೋವುಗಳನ್ನು ಗೋಶಾಲೆಗೆ ಬಿಡಲಾಗಿದೆ.

ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಯಾವಾಗ ?
ಗೋ ಹತ್ಯಾ ನಿಷೇಧವಿದ್ದರೂ ಮಲೆನಾಡು ಭಾಗದಲ್ಲಿ ಮಾತ್ರ ಗೋಕಳ್ಳತನ ಮತ್ತು ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬಿದ್ದಿಲ್ಲ. ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಗೋಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಪೊಲೀಸರ ಕಣ್ಣು ತಪ್ಪಿಸಲು ಗೋಕಳ್ಳರು ನಾನಾ ತಂತ್ರ ಹೆಣೆಯುತ್ತಿದ್ದಾರೆ. ಆದರೆ, ಗ್ರಾಮಸ್ಥರು ಹಾಗೂ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹಲವು ಗೋವುಗಳನ್ನ ರಕ್ಷಿಸಲಾಗುತ್ತಿದೆ. ಐಷಾರಾಮಿ ವಾಹನಗಳಲ್ಲಿ ಅತಿ ಹಿಂಸಾತ್ಮಕವಾಗಿ ತುಂಬಿ ಗೋವುಗಳನ್ನು ಸಾಗಿಸಲಾಗುತ್ತಿದೆ. ದಿನ ಬೆಳಗಾದರೆ ಗೋಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅಕ್ರಮ ಗೋ ಸಾಗಾಟ ಮತ್ತು ಕಳ್ಳತನಕ್ಕೆ ತಾರ್ಕಿಕ ಅಂತ್ಯವನ್ನು ಪೊಲೀಸ್ ಇಲಾಖೆಯೇ ಒದಗಿಸಬೇಕಾಗಿದೆ.

“ಮಲೆನಾಡು ಭಾಗದಲ್ಲಿ ಅಕ್ರಮ ಗೋಸಾಗಾಟವನ್ನು ಹಿಂದೂ ಸಂಘಟನೆ ಹಾಗೂ ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ್ದರೂ ಕೂಡ ಆರೋಪಿಗಳ ಮೇಲೆ ಸಣ್ಣ ಸೆಕ್ಷನ್ ಗಳನ್ನು ಹಾಕುತ್ತಿರುವುದರಿಂದ ಕೆಲವೇ ಗಂಟೆಯಲ್ಲಿ ಜಾಮೀನು ಪಡೆದು ಬರುತ್ತಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸದಿರುವುದು ಸಹ ಅಕ್ರಮ ಗೋ ಸಾಗಾಟಕ್ಕೆ ಪ್ರೇರಣೆ ನೀಡಿದೆ. ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋಸಾಗಾಟದ ಕುರಿತು ತತ್‌ಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಲಿ. ಇಲ್ಲದಿದ್ದಲ್ಲಿ ಸಂಘಟನೆಯಿಂದ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ದಿವೀರ್ ಮಲ್ನಾಡ್ ಎಚ್ಚರಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ...

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...