Home Latest News ಐದು ದಿನಗಳ ಕಾಲ ರಂಗೋತ್ಸವ : ಅಜ್ಜಂಪುರದಲ್ಲಿ ಕಲಾ ವೈಭವ
Latest News

ಐದು ದಿನಗಳ ಕಾಲ ರಂಗೋತ್ಸವ : ಅಜ್ಜಂಪುರದಲ್ಲಿ ಕಲಾ ವೈಭವ

Share
Share

ಚಿಕ್ಕಮಗಳೂರು : ಸ್ವಾತಂತ್ರ್ಯ ಹೋರಾಟಗಾರ ಬಿ.ಎಂ.ಏಕೋರಾಮಸ್ವಾಮಿ ನೆನಪಿಗಾಗಿ ಅಜ್ಜಂಪುರದಲ್ಲಿ ಇದೇ ಜನವರಿ ಐದರಿಂದ ಹತ್ತನೇ ತಾರೀಖಿನವರೆಗೆ ರಂಗೋತ್ಸವ ಕಾರ್ಯಗಳು ನಡೆಯಲಿವೆ. ರಂಗ ಚಟುವಟಿಕೆಗಳ ತಾಣ,ಜಾನಪದ ಕಲೆಗಳ ನಾಡು ಕಲಾವಿದರ ಸಂಗಮವನ್ನೇ ಹೊಂದಿರುವ ಅಜ್ಜಂಪುರದಲ್ಲಿ ಪ್ರತಿ ವರ್ಷದಂತೆ ಈ ಕಾರ್ಯಕ್ರಮಗಳನ್ನು ಆಯೋಜಿಸುವ ಗೆಳೆಯರ ಬಳಗದ ಅಧ್ಯಕ್ಷ ಎ.ಸಿ.ಚಂದ್ರಪ್ಪ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದಾರೆ.

ಕೈಲಾಸಂ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದ ಮುಖ್ಯ ದ್ವಾರಕ್ಕೆ ಹೆಸರಾಂತ ವೈದ್ಯರಾದ ನಾಗರಾಜ್ ಹೆಸರಿಡಲಾಗಿದ್ದು ಊರಿನ ಹಿರಿಯರಾದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜನಾರ್ದನ ರಾವ್ ಮತ್ತು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್.ತಿಪ್ಪೇರುದ್ರಪ್ಪರವರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಚಟ್ನಳ್ಳಿ ಮಹೇಶ್ ಮತ್ತು ಇಮ್ರಾನ್ ಅಹಮದ್ ಬೇಗ್ ಮತ್ತಿತರರು ಭಾಗವಹಿಸಲಿದ್ದಾರೆ.

ಜನವರಿ ಐದರಂದು ಬಂಗಾರದ ಮನುಷ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಜನವರಿ ಆರರಂದು ತುಲಾಭಾರ ನಾಟಕ ಜನವರಿ ಏಳರಂದು ಕೋಳೂರು ಕೊಡೆಗಾಸು ನಾಟಕ, ಜನವರಿ ಎಂಟರಂದು ಸರ ಸತಿಯಾಗಲೊಲ್ಲೆ, ಜನವರಿ ಒಂಬತ್ತುರಂದು ಮೋಳಿಗೆ ಮಾರಯ್ಯ ಹಾಗು ಜನವರಿ ಹತ್ತರಂದು ನಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜನವರಿ ಏಳರಂದು ಜಿಲ್ಲಾ ಮಟ್ಟದ ಭಾವಗೀತೆ ಮತ್ತು ಜಾನಪದಗೀತೆಗಳ ಸ್ಪರ್ಧೆ ನಡೆಯಲಿದ್ದು ಗೆಳೆಯರ ಬಳಗ ಮತ್ತು ಕಸಾಪದ ಹೆಚ್.ಆರ್.ಚಂದ್ರಪ್ಪ ಮತ್ತು ಕೃಷ್ಣಮೂರ್ತಿ, ಮೋಹನ್ ರಾವ್,ನವೀನ್ ಕುಮಾರ್ ಮತ್ತು ಪ್ರಶಾಂತ ಇಟಗಿ ಕಾರ್ಯಕ್ರಮದಲ್ಲಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...