Home Crime News ಹೊಸ ವರ್ಷದಂದೆ ಹೊಡೆದಾಡಿಕೊಂಡ ಪುಂಡರು : ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಗೂ ಹಲ್ಲೆ
Crime News

ಹೊಸ ವರ್ಷದಂದೆ ಹೊಡೆದಾಡಿಕೊಂಡ ಪುಂಡರು : ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಗೂ ಹಲ್ಲೆ

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ನ್ಯೂ ಇಯರ್ ಪಾರ್ಟಿ ಮುಗಿಸಿ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ನಗರದ ಕೆಂಪನಹಳ್ಳಿ ಹಾಗೂ ಅರವಿಂದ ನಗರದ ಯುವಕರು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಗಾಯಗೊಂಡವರನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ಮತ್ತೆ ಆಸ್ಪತ್ರೆ ಆವರಣದಲ್ಲಿಯೇ ಯುವಕರು ಬಡಿದಾಡಿಕೊಂಡು ಎದ್ದು, ಬಿದ್ದು ಬೈಕ್ ಗಳನ್ನು ಬೀಳಿಸಿಕೊಂಡು ಮೈ ಮೇಲೆ ಪ್ರಜ್ಞೆ ಇಲ್ಲದಂತೆ ಹೊಡೆದಾಡಿದ್ದಾರೆ.

ಈ ವೇಳೆ ಅಲ್ಲಿಯೇ ಸ್ಥಳದಲ್ಲಿ ವಾಹನ ನಿಲ್ಲಿಸಿಕೊಂಡು ಜಗಳ ಬಿಡಿಸಲು ಹೋದ ಆಂಬುಲೆನ್ಸ್ ಚಾಲಕ ಮೇಲೂ ಪುಂಡ ಯುವಕರು ಹಲ್ಲೆ ನಡೆಸಿರುವ ಆರೋಪ ಕೂಡಾ ಕೇಳಿ ಬಂದಿದೆ. ಸದ್ಯ ಪರಸ್ಪರ ಬಡಿದಾಡಿಕೊಂಡಿದ್ದ ನಾಲ್ವರು ಪುಂಡ ಯುವಕರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿಯೇ ಚಿಕಿತ್ಸೆ ಪಡೆದು ಇಂದು ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದು, ಪ್ರಕರಣ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು ಅದರೆ ಹೊಡೆದಾಟ ಘಟನೆಯ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳಿದು ಎರಡು ಏರಿಯಾ ಹುಡುಗರು ಕಿತ್ತಾಡಿಕೊಂಡಿದ್ದಾರೆ, ಆದರೆ ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಮೇಲೆ ನಡೆಸಿದ ಹಲ್ಲೆ ಬಗ್ಗೆ ಮಾತ್ರ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...