ಚಿಕ್ಕಮಗಳೂರು : ಕಾಫಿನಾಡಿನಲ್ಲಿ ನ್ಯೂ ಇಯರ್ ಪಾರ್ಟಿ ಮುಗಿಸಿ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ನಗರದ ಕೆಂಪನಹಳ್ಳಿ ಹಾಗೂ ಅರವಿಂದ ನಗರದ ಯುವಕರು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಗಾಯಗೊಂಡವರನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ಮತ್ತೆ ಆಸ್ಪತ್ರೆ ಆವರಣದಲ್ಲಿಯೇ ಯುವಕರು ಬಡಿದಾಡಿಕೊಂಡು ಎದ್ದು, ಬಿದ್ದು ಬೈಕ್ ಗಳನ್ನು ಬೀಳಿಸಿಕೊಂಡು ಮೈ ಮೇಲೆ ಪ್ರಜ್ಞೆ ಇಲ್ಲದಂತೆ ಹೊಡೆದಾಡಿದ್ದಾರೆ.
ಈ ವೇಳೆ ಅಲ್ಲಿಯೇ ಸ್ಥಳದಲ್ಲಿ ವಾಹನ ನಿಲ್ಲಿಸಿಕೊಂಡು ಜಗಳ ಬಿಡಿಸಲು ಹೋದ ಆಂಬುಲೆನ್ಸ್ ಚಾಲಕ ಮೇಲೂ ಪುಂಡ ಯುವಕರು ಹಲ್ಲೆ ನಡೆಸಿರುವ ಆರೋಪ ಕೂಡಾ ಕೇಳಿ ಬಂದಿದೆ. ಸದ್ಯ ಪರಸ್ಪರ ಬಡಿದಾಡಿಕೊಂಡಿದ್ದ ನಾಲ್ವರು ಪುಂಡ ಯುವಕರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿಯೇ ಚಿಕಿತ್ಸೆ ಪಡೆದು ಇಂದು ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದು, ಪ್ರಕರಣ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು ಅದರೆ ಹೊಡೆದಾಟ ಘಟನೆಯ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳಿದು ಎರಡು ಏರಿಯಾ ಹುಡುಗರು ಕಿತ್ತಾಡಿಕೊಂಡಿದ್ದಾರೆ, ಆದರೆ ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಮೇಲೆ ನಡೆಸಿದ ಹಲ್ಲೆ ಬಗ್ಗೆ ಮಾತ್ರ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.
Leave a comment