Home Latest News ರೋಟಿಬಾಜಿ ದತ್ತಗುಹೆಗೆ ಕೊಂಡೊಯ್ಯಲು ಯತ್ನಿಸಿದ ಶಾಖಾದ್ರಿ ಮೇಲೆ ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಒತ್ತಾಯ
Latest News

ರೋಟಿಬಾಜಿ ದತ್ತಗುಹೆಗೆ ಕೊಂಡೊಯ್ಯಲು ಯತ್ನಿಸಿದ ಶಾಖಾದ್ರಿ ಮೇಲೆ ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಒತ್ತಾಯ

Share
Share

ಚಿಕ್ಕಮಗಳೂರು : ಶ್ರೀಗುರುದತ್ತಾತ್ರೇಯ ಪೀಠದಲ್ಲಿ ಶಾಖಾದ್ರಿ ವಂಶಸ್ಥರು ಹಾಗೂ ಮುಸ್ಲಿಂ ಸಮುದಾಯದವರು ಫಾತೇಹ ಕಾರ್ಯಕ್ರಮವನ್ನು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆಸಲು ಮುಂದಾಗಿದ್ದು ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ್ ಆಗ್ರಹಿಸಿದರು.

ಪ್ರೆಸ್ ಕ್ಲಬ್ ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಡಿ.29ರಂದು ಕೆಲ ಮುಸ್ಲಿಂ ಸಮುದಾಯದವರು ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ರೋಟಿ ಬಾಜಿ ತಯಾರಿಸಿ ಮೆರವಣಿಗೆ ಮೂಲಕ ಆಗಮಿಸಿ ಫಾತೇಹ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಮುಜರಾಯಿ ಇಲಾಖೆ ಅಧಿಕಾರಿಗಳು ತಡೆದು ಪಾದಾರ್ಥಗಳನ್ನು ತಗೆದುಕೊಂಡು ಗುಹೆಯೊಳಗೆ ಫಾತೇಹ ಮಾಡಲು ಬಿಡುವುದಿಲ್ಲ ಎಂದಾಗ ಜಿಲ್ಲಾಧಿಕಾರಿ ಮುಜರಾಯಿ ಅಧಿಕಾರಿಗಳು ಮತ್ತು ವ್ಯವಸ್ಥಾಪನಾ ಸಮಿತಿ ವಿರುದ್ಧ ಘೋಷಣೆಗಳನ್ನು ಹಾಕಿ ಧಿಕ್ಕಾರವನ್ನು ಕೂಗಿದ್ದು ತಪ್ಪು ಎಂದರು.

ಗುಹೆಯಲ್ಲಿ ಹೊಸ ಆಚರಣೆಗಳಿಗೆ ಶಾಖಾದ್ರಿ ವಂಶಸ್ಥರು ಮತ್ತು ಮುಸ್ಲಿಂ ಸಮುದಾಯದವರು ಮುಂದಾಗಿದ್ದಾರೆ. ಫಾತೇಹ ಮಾಡು ವುದು ಸಮಾಧಿಗಳಿಗೆ ಮಾತ್ರ. ದತ್ತಪೀಠದ ಗುಹೆಯೊಳಗೆ ಪೀಠವಿದ್ದು, ದತ್ತಾತ್ರೇಯಸ್ವಾಮಿ ಪಾದುಕೆ ಹಾಗೂ ಮಹಾಸತಿ ಅನುಸೂಯ ದೇವಿಯವರ ಪೀಠವಿದೆ. ಆದರೆ, ಮುಸ್ಲಿಂ ಸಮುದಾಯದವರು ದಾದಾ ಹಯಾತ್ ಮೀರ್ ಖಲಂದರ್ ಮತ್ತು ಮಾಮಾಜುಗ್ನಿ ಅವರ ಸಮಾಧಿಗಳು ಇವೆ ಎಂದು ಹೇಳುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು ಎಂದರು.

ಮುಜರಾಯಿ ಇಲಾಖೆ ಅಧಿಕಾರಿಗಳನ್ನು ಏರುಧ್ವನಿಯಲ್ಲಿ ಪ್ರಶ್ನಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ ಎಂದ ರಂಗನಾಥ ಪದೇ ಪದೇ ಗೊಂದಲ ಹಾಗೂ ಅಶಾಂತಿ ಸೃಷ್ಟಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು, ಗ್ಯಾರವಿ ಹಬ್ಬ ಆಚರಣೆ ಸಂಬಂಧ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶವಿಲ್ಲದೆ ಯಾವುದೇ ಹೊಸ ಆಚರಣೆ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಜಿಲ್ಲಾಧಿಕಾರಿಗಳ ಮೇಲೆ ಕೂಡಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...