Home Political News ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ
Political News

ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ

Share
Share

ಚಿಕ್ಕಮಗಳೂರು : ನೂರು ಕೋಟಿ ರೂ. ವೆಚ್ಚದಲ್ಲಿ ದತ್ತಪೀಠ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚಿಸಿದ್ದು, ಪ್ರಾಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದು ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಾಸ್ತಾವನೆ ಸಲ್ಲಿಸಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲೆಯ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂ ರ್ಣಗೊಳಿಸುವಂತೆ ಸಂಬಂಧಪಟ್ಟ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ರೈಲ್ವೇ ಸಂಪರ್ಕ ವಿಸ್ತರಣೆ ಸಂಬಂಧ ರಾಜ್ಯ ರೈಲ್ವೇ ಸಚಿವರಾದ ವಿ. ಸೋಮಣ್ಣ ಅವರೊಂದಿಗೂ ಚರ್ಚಿ ನಡೆಸಲಾಗಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು, ತಿರುಪತಿ ನೂತನ ರೈಲು ಮಂಜೂರು ಮಾಡುವಂತೆ ಕೋರಲಾಗಿದೆ ಎಂದರು. ಸರ್ಫೆಸಿ ಕಾಯ್ದೆಯಡಿಯಲ್ಲಿ ಕಾಫಿಬೆಳೆಗಾರರ ಸುಸ್ತಿ ಸಾಲಗಾರರ ಬೆಳೆ ಮತ್ತು ಜಮೀನು ಆನ್‌ಲೈನ್ ಮೂಲಕ ಹರಾಜು ಹಾಕಲಾ ಗುತ್ತಿತ್ತು. ಪಾರ್ಲಿಮೆಂಟ್ ಅಧಿವೇಶನದಲ್ಲಿ ಈ ಸಂಬAಧ ಪ್ರಶ್ನಿಸಿದ್ದು, ಸರ್ಫೆಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಅನ್ವಯವಾಗುವುದಿಲ್ಲ ವೆಂದು ಸಂಬಂಧಪಟ್ಟ ಇಲಾಖೆ ಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬೆಳೆಗಾರರಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು. 2500 ಕೋಟಿ ರೂ. ಕಾಫಿ ಬೆಳೆಗಾರರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದಾರೆ. ಅದರಲ್ಲಿ ಕೆನರಾ ಬ್ಯಾಂಕ್‌ ವೊಂದರಲ್ಲಿಯೇ 1600 ಕೋಟಿ ರೂ. ಸಾಲ ಪಡೆದುಕೊಂಡಿದ್ದು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ 817 ಬೆಳೆಗಾರರು ಒನ್ ಟೈಮ್ ಸೆಟ್ಲ ಮೆಂಟ್‌ಗೆ ಅರ್ಹರಿದ್ದು, 142 ಜನ ಬೆಳೆಗಾರರು ಒನ್ ಟೈನ್ ಸೆಟ್ಲಮೆಂಟ್ ಮಾಡಿಕೊಂಡಿದ್ದಾರೆ ಎಂದರು.

ಉಪಗ್ರಹದ ಮೂಲಕ ಬಿಎಸ್‌ಎನ್‌ಎಲ್ ಸಂಪರ್ಕ ನೀಡುವಂತೆ ಸಂಬಂಧಪಟ್ಟ ಇಲಾಖೆ ಸಚಿವರಿಗೆ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಜಿಲ್ಲೆಯಲ್ಲಿ ಮೂರು ಎಫ್.ಎಂ. ಸ್ಟೇಷನ್ ಮಂಜೂರಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಾಸಕರನ್ನು ಒಳಗೊಂಡ ಸಭೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದರು

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...