Home Latest News ನಕ್ಸಲರು ಶರಣಾಗಲು ನೂತನ ಪ್ಯಾಕೇಜ್ : ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಮಾಹಿತಿ
Latest News

ನಕ್ಸಲರು ಶರಣಾಗಲು ನೂತನ ಪ್ಯಾಕೇಜ್ : ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಮಾಹಿತಿ

Share
Share

ಚಿಕ್ಕಮಗಳೂರು : ರಾಜ್ಯ ಸರ್ಕಾರ 2024ರ ಸಾಲಿನಲ್ಲಿ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಮೊದಲ ಆದ್ಯತೆ ನೀಡಲಿದೆ. ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ನಕ್ಸಲರು ಭೂಗತರಾಗದೇ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಕರೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಕ್ಸಲರ ಶರಣಾಗತಿ ಸಂಬಂಧ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಸರಕಾರ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪ್ರಾಮುಖ್ಯತೆ ನೀಡಿದೆ. ಜಿಲ್ಲೆಯಲ್ಲಿ ಈ ಹಿಂದೆಯೂ ನಕ್ಸಲರು ಶರಣಾಗತರಾಗಿದ್ದಾರೆ. ಎಂದ ಅವರು ಕರ್ನಾಟಕ ಸೇರಿ ಹೊರ ರಾಜ್ಯದ ನಕ್ಸಲರಿಗೂ ಶರಣಾಗತಿಗೆ ಅವಕಾಶ ನೀಡಲಾಗಿದೆ ಎಂದರು. ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಮೂರು ವರ್ಗಗಳನ್ನು ಮಾಡಲಾಗಿದೆ. ಕರ್ನಾಟಕದವರಾಗಿದ್ದು, ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರೆ 7ಲಕ್ಷ ಪರಿಹಾರಧನವನ್ನು ಮೂರು ಹಂತದಲ್ಲಿ ನೀಡಲಾಗುವುದು. ಹೊರ ರಾಜ್ಯದವರಾಗಿದ್ದು, ಸಕ್ರಿಯವಾಗಿದ್ದರೆ ಅವರಿಗೆ 5ಲಕ್ಷ ಹಣವನ್ನು ಮೂರು ಹಂತಗಳಲ್ಲಿ ನೀಡಲಾಗುವುದು.

ನಕ್ಸಲ್ ಬೆಂಬಲಿತರ ಶರಣಾಗತಿಗೆ 2ಲಕ್ಷ ರೂ. ಘೋಷಣೆ ಮಾಡಲಾಗಿದ್ದು, ಮೂರು ಹಂತದಲ್ಲಿ ಪರಿಹಾರ ಹಣವನ್ನು ನೀಡಲಾಗುವುದು ಎಂದರು. ಶರಣಾಗತಿಯಾಗುವ ನಕ್ಸಲರು ತಮ್ಮನ್ನು ನೆರವಾಗಿ ಸಂಪರ್ಕ ಮಾಡಬಹುದು. ಅವರಿಗೆ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ನಕ್ಸಲರನ್ನು ಶರಣಾಗತಿ ಮಾಡಿಸುವವರಿಗೂ ಪೊಲೀಸ್ ಇಲಾಖೆ ಬೆಂಬಲ ನೀಡುತ್ತದೆ ಎಂದ ಅವರು, ಮಾಜಿ ನಕ್ಸಲರ ಸಮಸ್ಯೆ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಭೆ ಮಾಡುತ್ತೇವೆ. ಶರಣಾಗತರಾಗಿರುವ ಮಾಜಿ ನಕ್ಸಲರು ತಮ್ಮ ಸಮಸ್ಯೆಗಳನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬಹುದು ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...