Home Latest News ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ
Latest News

ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಲ್ಲಂಗಡಿಯ ನಕಲಿ ಬೀಜ ವಿತರಿಸಿ ರೈತರಿಗೆ ದೋಖ ಮಾಡಿದ ಘಟನೆ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಗುರುಶಾಂತಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಿಗಿಸುವುದರ ಜೊತೆಗೆ ರೈತರಿಗೆ ಆಗಿರುವ ನಷ್ಟದ ಬೆಲೆ ತುಂಬಿ ಕೊಡಲು ಒತ್ತಯಿಸಿದ್ದಾರೆ.

ವೋಡಿಪಸ್ ಕಂಪನಿಯು ಕಲ್ಲಂಗಡಿ ಬೀಜ ಮಾರಾಟ ಮಾಡಿದ್ದು ಇದರಿಂದಾಗಿ ರೈತ ನಾಗರಾಳು ಗುರುಶಾಂತಪ್ಪರವರಿಗೆ 4,30,000 ನಷ್ಟ ಉಂಟಾಗಿದ್ದು ಕಂಪನಿ ನಷ್ಟ ತುಂಬಿ ಕೊಡಲು ಒತ್ತಯಿಸಿದರು. ಬೀಜ ಬಿತ್ತಿದ 60 ದಿನಗಳವರೆಗೆ ಸಮೃದ್ಧವಾಗಿ ಬೆಳೆದ ಬೆಳೆಯಲ್ಲಿ ಹೂವು ಮಾತ್ರ ಬಿಟ್ಟಿದೆ ಆದರೆ ಕಾಯಿ ಬಿಟ್ಟಿಲ್ಲ ಎಂದ ಅವರು ಈ ಬಗ್ಗೆ ಅನುಮಾನಗೊಂಡ ರೈತ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ಮತ್ತು ಕೃಷಿ ವಿಶ್ವ ವಿದ್ಯಾಲಯ ದ ವಿಜ್ಞಾನಿಗಳಿಗೆ ದೂರು ಸಲ್ಲಿಸಿದ್ದರಿಂದ ವಿಜ್ಞಾನಿಗಳಾದ ಡಾ//ಪಲ್ಲವಿ,ಡಾ//ಯಮುನ ,ಡಾ//ಸುಭಾಸಿಣಿ ಮತ್ತು ಡಾ//ಸುರೇಶ್ ಕುಮಾರ್ ತಂಡ ರೈತರ ಹೊಲಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾಯಿ ಕಚ್ಚದಿರುವ ಬಗ್ಗೆ ವರದಿ ಸಲ್ಲಿಸಿ ಕಂಪನಿಯ ಬೀಜ ಇಲಾಖೆಯಲ್ಲಿ ನಮೂದು ಆಗಿಲ್ಲ ಎಂದು ತಿಳಿಸಿದ್ದು ,ಅನಧಿಕೃತವಾಗಿ ಮಾರಾಟ ಮಾಡಿರುವ ಕಂಪನಿಯ ವಿರುದ್ಧ ಕಾನೂನು ಕ್ರಮ ಜರಿಗಿಸಲು ರೈತ ಸಂಘ ಒತ್ತಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹೇಶ್, ಕೆ.ಕೆ.ಕೃಷ್ಣೇಗೌಡ ದಯಾನಂದ ಮುಂತಾದವರು ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...