Home Crime News ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ
Crime News

ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ

Share
Share

ಚಿಕ್ಕಮಗಳೂರು : ತಾಯಿ ಮನೆಗೆ ಬರಲಿಲ್ಲ ಎಂದು ಅಳಿಯ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದೆ. ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ಅಮ್ಮನಿಗೆ ಮನೆಗೆ ಬರುವಂತೆ ಹೇಳಿದ್ದನು. ಜೊತೆಗೆ, ಅಮ್ಮನನ್ನು ಮನೆಗೆ ಕಳುಹಿಸುವಂತೆ ಮಾವ ಮಹಾಲಿಂಗನಿಗೂ ಹೇಳಿದ್ದನು. ಆದರೂ, ತಾಯಿ ಗಂಡನ ಮನೆಗೆ ಹೋಗಿರಲಿಲ್ಲ. ಈ ಬಗ್ಗೆ ಭರತ್ ಮಾವ ಮಹಾಲಿಂಗ ಭರತ್ ಹಾಗೂ ಆತನ ತಂದೆ ರಾಮಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನೀವು ನನ್ನ ತಂಗಿಗೆ ಸಾಕಷ್ಟು ಹಿಂಸೆ ನೀಡಿದ್ದೀರಾ. ಹಾಗಾಗಿ ಅವಳನ್ನ ಕಳಿಸುವುದಿಲ್ಲ. ಅಪ್ಪ-ಮಗ ಇಬ್ಬರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದನು.

ಆದರೂ, ಭರತ್ ಮೇಲಿಂದ ಮೇಲೆ ಫೋನ್ ಮಾಡಿ ಅಮ್ಮನನ್ನು ಕಳುಹಿಸುವಂತೆ ಬಲವಂತ ಮಾಡಿದ ಪರಿಣಾಮ ಮಾವ ಮಹಾಲಿಂಗ ಡಿಸೆಂಬರ್ 31ರಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದರು ಎಂಬ ಸಿಟ್ಟಿನಿಂದ ಭರತ್ ಹಾಡಹಗಲೇ ನಡು ರಸ್ತೆಯಲ್ಲಿ ಮಾವನ ಮೇಲೆ ಮನಸ್ಸೊ ಇಚ್ಚೆ ಮಚ್ಚು ಬೀಸಿದ್ದಾನೆ. ಕಡೂರು ಪಟ್ಟಣದಲ್ಲಿ ಆಟೋ ಡ್ರೈವರ್ ವೃತ್ತಿ ಮಾಡುತ್ತಿರುವ ಭರತ್ ಆಟೋ ಹಿಂದೆ ಲಾಂಗ್ ಇಟ್ಟು ಮಾವನನ್ನ ಹುಡುಕಾಡಿದ್ದಾನೆ. ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ಕ್ಯಾಂಟೀನ್ ಹತ್ತಿರ ಟೀ ಕುಡಿಯುತ್ತಿದ್ದ ಮಾವನ ಮೇಲೆ ಮನಸ್ಸೊ ಇಚ್ಛೆ ಲಾಂಗ್ ಬೀಸಿದ್ದಾನೆ. ಲಾಂಗ್ ಬೀಸಿದ ಬಳಿಕ ರಾಜರೋಷವಾಗಿ ಬಂದು ಆಟೋದಲ್ಲಿ ಲಾಂಗ್ ಇಟ್ಟುಕೊಂಡು ವಾಪಸ್ ಹೋಗಿದ್ದಾನೆ.

ಹಲ್ಲೆಗೊಳಗಾದ ಭರತ್ ಮಾವ ಮಹಾಲಿಂಗ ಅವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ಅಪ್ಪ ರಾಮಸ್ವಾಮಿ ಹಾಗೂ ಮಗ ಭರತ್ ನನ್ನ ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದಾರೆ.‌ ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...