Home Crime News ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ
Crime News

ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ

Share
Share

ಚಿಕ್ಕಮಗಳೂರು : ತಾಯಿ ಮನೆಗೆ ಬರಲಿಲ್ಲ ಎಂದು ಅಳಿಯ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದೆ. ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ಅಮ್ಮನಿಗೆ ಮನೆಗೆ ಬರುವಂತೆ ಹೇಳಿದ್ದನು. ಜೊತೆಗೆ, ಅಮ್ಮನನ್ನು ಮನೆಗೆ ಕಳುಹಿಸುವಂತೆ ಮಾವ ಮಹಾಲಿಂಗನಿಗೂ ಹೇಳಿದ್ದನು. ಆದರೂ, ತಾಯಿ ಗಂಡನ ಮನೆಗೆ ಹೋಗಿರಲಿಲ್ಲ. ಈ ಬಗ್ಗೆ ಭರತ್ ಮಾವ ಮಹಾಲಿಂಗ ಭರತ್ ಹಾಗೂ ಆತನ ತಂದೆ ರಾಮಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನೀವು ನನ್ನ ತಂಗಿಗೆ ಸಾಕಷ್ಟು ಹಿಂಸೆ ನೀಡಿದ್ದೀರಾ. ಹಾಗಾಗಿ ಅವಳನ್ನ ಕಳಿಸುವುದಿಲ್ಲ. ಅಪ್ಪ-ಮಗ ಇಬ್ಬರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದನು.

ಆದರೂ, ಭರತ್ ಮೇಲಿಂದ ಮೇಲೆ ಫೋನ್ ಮಾಡಿ ಅಮ್ಮನನ್ನು ಕಳುಹಿಸುವಂತೆ ಬಲವಂತ ಮಾಡಿದ ಪರಿಣಾಮ ಮಾವ ಮಹಾಲಿಂಗ ಡಿಸೆಂಬರ್ 31ರಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದರು ಎಂಬ ಸಿಟ್ಟಿನಿಂದ ಭರತ್ ಹಾಡಹಗಲೇ ನಡು ರಸ್ತೆಯಲ್ಲಿ ಮಾವನ ಮೇಲೆ ಮನಸ್ಸೊ ಇಚ್ಚೆ ಮಚ್ಚು ಬೀಸಿದ್ದಾನೆ. ಕಡೂರು ಪಟ್ಟಣದಲ್ಲಿ ಆಟೋ ಡ್ರೈವರ್ ವೃತ್ತಿ ಮಾಡುತ್ತಿರುವ ಭರತ್ ಆಟೋ ಹಿಂದೆ ಲಾಂಗ್ ಇಟ್ಟು ಮಾವನನ್ನ ಹುಡುಕಾಡಿದ್ದಾನೆ. ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ಕ್ಯಾಂಟೀನ್ ಹತ್ತಿರ ಟೀ ಕುಡಿಯುತ್ತಿದ್ದ ಮಾವನ ಮೇಲೆ ಮನಸ್ಸೊ ಇಚ್ಛೆ ಲಾಂಗ್ ಬೀಸಿದ್ದಾನೆ. ಲಾಂಗ್ ಬೀಸಿದ ಬಳಿಕ ರಾಜರೋಷವಾಗಿ ಬಂದು ಆಟೋದಲ್ಲಿ ಲಾಂಗ್ ಇಟ್ಟುಕೊಂಡು ವಾಪಸ್ ಹೋಗಿದ್ದಾನೆ.

ಹಲ್ಲೆಗೊಳಗಾದ ಭರತ್ ಮಾವ ಮಹಾಲಿಂಗ ಅವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ಅಪ್ಪ ರಾಮಸ್ವಾಮಿ ಹಾಗೂ ಮಗ ಭರತ್ ನನ್ನ ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದಾರೆ.‌ ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ...

ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ₹277 ಕೋಟಿ ದಂಡ ಪಾವತಿಸಿ ಎಂದು ರೆವೆನ್ಯು ಗುಪ್ತಚರ ನಿರ್ದೇಶನಾಲಯವು...

ಅಸ್ಸಾಂ ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿಗಳು ಕಾಫಿನಾಡಿನಲ್ಲಿ ಅರೆಸ್ಟ್

ಚಿಕ್ಕಮಗಳೂರು: ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿ ಅಸ್ಸಾಂ ರಾಜ್ಯದ ಮೋರಿಗಾನ್ ಜಿಲ್ಲಾ ಕಾರಾಗೃಹದಲ್ಲಿ ಸಜಾ ಬಂಧಿಗಳಾಗಿದ್ದ ಇಬ್ಬರು...

ಪುನಗು ಬೆಕ್ಕು ಬೇಟೆಯಾಡಿದವನ ಬಂಧನ

ಚಿಕ್ಕಮಗಳೂರು:  ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದುಮನೆ ಗ್ರಾಮದಲ್ಲಿ ಪುನುಗು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ...