Home Political News ಅವಿಶ್ವಾಸಕ್ಕೆ ಮುಂದಾದ ಸದಸ್ಯರ ತಂತ್ರಕ್ಕೆ ತಿರುಮಂತ್ರ ಹಾಕಿದ ತ್ರಿಮೂರ್ತಿ
Political News

ಅವಿಶ್ವಾಸಕ್ಕೆ ಮುಂದಾದ ಸದಸ್ಯರ ತಂತ್ರಕ್ಕೆ ತಿರುಮಂತ್ರ ಹಾಕಿದ ತ್ರಿಮೂರ್ತಿ

Share
Share

ಚಿಕ್ಕಮಗಳೂರು : ಸಖರಾಯಪಟ್ಟಣ ಹೋಬಳಿಯ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಿಲ್ಲೆಯ ಕೆಎಎಸ್ ಐಎಎಸ್ ಅಧಿಕಾರಿಗಳೇ ಬೆಚ್ಚಿಬೀಳಿಸುವ ರೀತಿಯ ಪ್ರಕರಣ ಒಂದಕ್ಕೆ ನಾಂದಿ ಹಾಡಿದ್ದಾರೆ. ತನ್ನ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ಮುಂದಾದ ಪಂಚಾಯ್ತಿ ಸದಸ್ಯರಿಗೆ ತಿರುಮಂತ್ರ ಹೂಡಲು ಮಾಸ್ಟರ್ ಪ್ಲಾನ್ ಮಾಡಿದ ಈ ತ್ರಿಮೂರ್ತಿ ಜಿಲ್ಲಾ ಪಂಚಾಯ್ತಿ ಸಿಇಓ ತರೀಕೆರೆ ಎ.ಸಿ ಕಡೂರು ತಾಲ್ಲೂಕು ಪಂಚಾಯ್ತಿ ಇಓ ಸೇರಿದಂತೆ ಗ್ರಾಮ ಪಂಚಾಯ್ತಿ ಪಿಡಿಓ ನನ್ನು ಕೋರ್ಟ್ ಗೆ ಎಳೆದಿದ್ದಾರೆ.

ವರ್ಷದ ಹಿಂದೆ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷನಾಗಿ ಆಯ್ಕೆಯಾದ ಈ ತ್ರಿಮೂರ್ತಿ ಆರಂಭದಲ್ಲಿ ಎಲ್ಲಾ ಸದಸ್ಯರ ಜೊತೆ ಉತ್ತಮ ಹೊಂದಾಣಿಕೆ ಮಾಡಿಕೊಂಡಿದ್ದರು, ಕ್ರಮೇಣ ಸಂಬಂಧಗಳು ಹಳಸಿದ್ದರಿಂದ ಅಧ್ಯಕ್ಷರ ಮೇಲೆ ಅವಿಶ್ವಾಸ ತರಲು ಸದಸ್ಯರು ಮುಂದಾಗುತ್ತಾರೆ, ಈ ಬಗ್ಗೆ ಮಾಹಿತಿ ಪಡೆದುಕೊಂಡ ತ್ರಿಮೂರ್ತಿ ಅವಿಶ್ವಾಸಕ್ಕೆ ಸೆಡ್ಡು ಹೊಡೆಯಲು ಹೈಕೋರ್ಟ್ ಮೆಟ್ಟಿಲೇರಿ ಕೇವಿಯಟ್ ತರುವ ಮೂಲಕ ಎಲ್ಲ ಅಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದಾರೆ.

ಹತ್ತು ಜನ ಸದಸ್ಯರಲ್ಲಿ ಎಂಟು ಮಂದಿ ಅವಿಶ್ವಾಸಕ್ಕೆ ಸಹಿ ಹಾಕಿ ತ್ರಿಮೂರ್ತಿಯನ್ನು ಇಳಿಸಲು ಯತ್ನಿಸಿದ್ದರು, ಇದೀಗ ತಮ್ಮ ಅಧಿಕಾರ ಉಳಿಸಿಕೊಳ್ಳಲು ವಿಕೇಂದ್ರಿಕರಣ ವ್ಯವಸ್ಥೆಯ ಬಲ ಬಳಸಿ ಜೋಡಿ ಹೋಚಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು ಇದನ್ನು ತನ್ನ ತಲೆಗೆ ಕಟ್ಟಲು ಅವಿಶ್ವಾಸ ಮಂಡನೆ ಮಾಡುತ್ತಿದ್ದಾರೆ ಎಂದು ಕೋರ್ಟ್ ನಿಂದ ಕೇವಿಯಟ್ ಪಡೆದಿರುವ ತ್ರಿಮೂರ್ತಿ ವಿರೋಧಿಗಳಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದ್ಯ ತರೀಕೆರೆ ಎ.ಸಿ ಗೆ ಅವಿಶ್ವಾಸ ಮಂಡನೆ ಮಾಡದಂತೆ ಆದೇಶವಿದ್ದು ಮಿನಿಮಂ ಆರು ತಿಂಗಳು ಬೀಸೊ ದೊಣ್ಣೆಯಿಂದ ತ್ರಿಮೂರ್ತಿ ತಪ್ಪಿಸಿಕೊಂಡಂತಾಗಿದೆ. ಈ ನಡುವೆ ಗ್ರಾಮ ಪಂಚಾಯ್ತಿ ಪಿಡಿಓ ಮಂಜುನಾಥ್ ನನ್ನು ಜಿಲ್ಲಾ ಪಂಚಾಯ್ತಿ ಸಿಇಓ ಎಚ್ ಎಸ್ ಕೀರ್ತನಾ ಅಮಾನತು ಮಾಡಿದ್ದಾರೆ.

ಇಷ್ಟೆಲ್ಲಾ ವಿಷಯಗಳ ಹಿಂದೆ ಇರುವ ಮಾಸ್ಟರ್ ಮೈಂಡ್ ಶ್ರೀ ಶ್ರೀ ಶ್ರೀ ಎಸ್ ಎಲ್ ಭೋಜೇಗೌಡ ಎಂಬುದು ತಿಳಿದವರ ಅಂಬೋಣ……..

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...