Home Latest News ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ
Latest News

ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಸೇರಲಿದ್ದಾರೆ ಎಂಬುದು ಖಚಿತವಾಗಿದೆ, ಈ ಮೂಲಕ ಕಳೆದ ಮೂವತ್ತು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದು ಅದು ಕೊನೆಗೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಕ್ಸಲ್ ವಿಕ್ರಮ್ ಗೌಡ ಮತ್ತು ಪೊಲೀಸ್ ರ ಮಧ್ಯೆ ಚಕಮಕಿ ನಡೆದು ವಿಕ್ರಮ್ ಗೌಡ ಅಸುನೀಗಿದ ನಂತರ ಇನ್ನುಳಿದ ನಕ್ಸಲ್ ರು ಮುಖ್ಯವಾಹಿನಿಗೆ ಕರೆತರಲು ಹಲವರು ಪ್ರಯತ್ನಿಸಿದ್ದು ಸರ್ಕಾರ ಕೂಡ ಇದಕ್ಕೆ ಸ್ಪಂದಿಸಿದ್ದರ ಫಲವಾಗಿ ನಾಳೆ ಮುಂಡುಗಾರು ಲತಾ,ಸುಂದರಿ ಕುತ್ಲೂರು,ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ,ಕೆ.ವಸಂತ ಮತ್ತು ಟಿ.ಎನ್ ಜೇಶ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರಲಿದ್ದಾರೆ. ಇನ್ನೋರ್ವ ನಕ್ಸಲ್ ಜಯಣ್ಣ ಅಲಿಯಾಸ್ ಜಾನ್ ಸಂಪರ್ಕ ಸಾಧಿಸಲಾಗಿಲ್ಲ ಎನ್ನಲಾಗುತ್ತಿದೆ. ನಕ್ಸಲ್ ರು ಅನೇಕ ಬೇಡಿಕೆ ಇಟ್ಟಿದ್ದು ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಹಿಂದೆ ಶರಣಾದವರ ಗೋಳು ಕೇಳ ಬೇಕಾಗಿದೆ. 2016 ರಲ್ಲಿ ಶರಣಾಗಿರುವ ನಿಲುಗುಳಿ ಪದ್ಮನಾಭ ಯಾವ ಭರವಸೆಗೂ ಸ್ಪಂದಿಸಿಲ್ಲ. ಪ್ರತಿಯೊಂದು ವಿಚಾರಕ್ಕೆ ಪೊಲೀಸ್ರು ವಿಚಾರಣೆ ನೆಪದಲ್ಲಿ ಮನೆಯ ಹತ್ತಿರ ಬರುತ್ತಾರೆ. ಕಳೆದ ಎಂಟು ವರ್ಷಗಳಿಂದ ಕೋರ್ಟ್ ಅಲೆಯುವಂತೆ ಆಗಿದೆ ಸ್ವಯಂ ಉದ್ಯೋಗ ಮಾಡಲು ನೆರವು ನೀಡಿದ್ದು ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಒಟ್ಟಾರೆ ಸರ್ಕಾರದ ತೀರ್ಮಾನ ಮತ್ತು ನಕ್ಸಲ್ ರು ಮುಖ್ಯ ವಾಹಿನಿಗೆ ಬರುತ್ತಿರುವುದರಿಂದ ಹಲವು ರಾಜ್ಯಗಳಿಗೆ ಒಳ್ಳೆಯ ವಾತವರಣ ನಿರ್ಮಾಣವಾಗಲಿದೆ ಎಂದೇ ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...