Home Latest News ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ
Latest News

ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಸೇರಲಿದ್ದಾರೆ ಎಂಬುದು ಖಚಿತವಾಗಿದೆ, ಈ ಮೂಲಕ ಕಳೆದ ಮೂವತ್ತು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದು ಅದು ಕೊನೆಗೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಕ್ಸಲ್ ವಿಕ್ರಮ್ ಗೌಡ ಮತ್ತು ಪೊಲೀಸ್ ರ ಮಧ್ಯೆ ಚಕಮಕಿ ನಡೆದು ವಿಕ್ರಮ್ ಗೌಡ ಅಸುನೀಗಿದ ನಂತರ ಇನ್ನುಳಿದ ನಕ್ಸಲ್ ರು ಮುಖ್ಯವಾಹಿನಿಗೆ ಕರೆತರಲು ಹಲವರು ಪ್ರಯತ್ನಿಸಿದ್ದು ಸರ್ಕಾರ ಕೂಡ ಇದಕ್ಕೆ ಸ್ಪಂದಿಸಿದ್ದರ ಫಲವಾಗಿ ನಾಳೆ ಮುಂಡುಗಾರು ಲತಾ,ಸುಂದರಿ ಕುತ್ಲೂರು,ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ,ಕೆ.ವಸಂತ ಮತ್ತು ಟಿ.ಎನ್ ಜೇಶ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರಲಿದ್ದಾರೆ. ಇನ್ನೋರ್ವ ನಕ್ಸಲ್ ಜಯಣ್ಣ ಅಲಿಯಾಸ್ ಜಾನ್ ಸಂಪರ್ಕ ಸಾಧಿಸಲಾಗಿಲ್ಲ ಎನ್ನಲಾಗುತ್ತಿದೆ. ನಕ್ಸಲ್ ರು ಅನೇಕ ಬೇಡಿಕೆ ಇಟ್ಟಿದ್ದು ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಹಿಂದೆ ಶರಣಾದವರ ಗೋಳು ಕೇಳ ಬೇಕಾಗಿದೆ. 2016 ರಲ್ಲಿ ಶರಣಾಗಿರುವ ನಿಲುಗುಳಿ ಪದ್ಮನಾಭ ಯಾವ ಭರವಸೆಗೂ ಸ್ಪಂದಿಸಿಲ್ಲ. ಪ್ರತಿಯೊಂದು ವಿಚಾರಕ್ಕೆ ಪೊಲೀಸ್ರು ವಿಚಾರಣೆ ನೆಪದಲ್ಲಿ ಮನೆಯ ಹತ್ತಿರ ಬರುತ್ತಾರೆ. ಕಳೆದ ಎಂಟು ವರ್ಷಗಳಿಂದ ಕೋರ್ಟ್ ಅಲೆಯುವಂತೆ ಆಗಿದೆ ಸ್ವಯಂ ಉದ್ಯೋಗ ಮಾಡಲು ನೆರವು ನೀಡಿದ್ದು ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಒಟ್ಟಾರೆ ಸರ್ಕಾರದ ತೀರ್ಮಾನ ಮತ್ತು ನಕ್ಸಲ್ ರು ಮುಖ್ಯ ವಾಹಿನಿಗೆ ಬರುತ್ತಿರುವುದರಿಂದ ಹಲವು ರಾಜ್ಯಗಳಿಗೆ ಒಳ್ಳೆಯ ವಾತವರಣ ನಿರ್ಮಾಣವಾಗಲಿದೆ ಎಂದೇ ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....