Home Latest News ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್
Latest News

ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲಿರುವ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಮಾತನಾಡಿರುವ ವಿಡಿಯೋ ಇದೀಗ ರಿವೀಲ್ ಆಗಿದೆ.

ಶರಣಾಗತಿಗೆ ಮುನ್ನಾ ನಕ್ಸಲ್ ನಾಯಕಿ ಮುಂಡುಗಾರು ಲತಾ ಎಕ್ಸ್ ಕ್ಲೂಸಿವ್ ಮಾತನಾಡಿದ್ದಾರೆ. ಚಿಕ್ಕಮಗಳೂರಿಗೆ ಆಗಮಿಸುವ ಮುನ್ನಾ ಕಾಡಿನಲ್ಲಿ ಎಲ್ಲಾ ಆರು ಜನ ನಕ್ಸಲರು ಸಭೆ ನಡೆಸಿ ನಂತರ ಮಾತನಾಡಿರುವ ಲತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ, ಯಾರೆಲ್ಲ ಪ್ರಜಾ ತಾಂತ್ರಿಕ ಸಂವಿಧಾನ ಪರ ಹೋರಾಟ ಬಯಸುತ್ತಿದ್ದಾರೋ

ಅದೇ ರೀತಿ ಜನ್ರ ಪರ ಹೋರಾಟ ನಾವು ಮಾಡ್ತೇವೆ ಎಂದಿರುವ ಲತಾ ಜನರ ಪರ ಕೊನೆಯ ಉಸಿರಿರುವ ತನಕ ನಿಲ್ತೇವೆ ಜನ್ರಿಗಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ. ಕರ್ನಾಟಕ, ಕೇರಳ, ತಮಿಳು ನಾಡಿನವ್ರು ಅರು ಜನ ನಕ್ಸಲರು ಡಿಸೈಡ್ ಮಾಡಿ ಚರ್ಚೆ ಮಾಡಿದ್ದೇವೆ ಎಂದಿರುವ ಮುಂಡಗಾರು ಲತಾ ಅಲ್ಲಿನ ಸ್ಥಿತಿಗಳ ಬಗ್ಗೆ ಸಂಘಟಕರು ಮನವರಿಕೆ ಮಾಡಿಸಿದ್ದಾರೆ ಎನ್ನುವ ಮೂಲಕ ಸರ್ಕಾರದ ಜೊತೆ ಸಂಧಾನಕ್ಕೆ ಯತ್ನಿಸಿದವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಎಲ್ಲಾ ಕಾಂಮ್ರೆಡ್ ಗಳನ್ನು ನಾವು ಮುಂದೆ ನಡೆಯುವ ಹೋರಾಟಕ್ಕೆ ಸ್ವಾಗತಿಸುತ್ತೇವೆ

ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತೇ ಅನ್ನೋ ಭರವಸೆಯೊಂದಿಗೆ ಬರ್ತಿದ್ದೇವೆ ಎಂದಿರುವ ಲತಾ ನಮ್ಮ ಶರಣಾಗತಿ ಪ್ರಕ್ರಿಯೆಗೆ ಎಲ್ಲಾ ಪ್ರಮುಖ
ಸಂಘಟಕರೆಲ್ಲರ ಶ್ರಮ ಹಾಕಿದ್ದಾರೆ ಎಂದು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...