Home namma chikmagalur best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
namma chikmagalur

best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ

Share
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
Share

ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ರಾಜ್ಯ ಘಟಕ ಮತ್ತು ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ, ಅಕ್ಷರದ ಹರಿಕಾರರಾದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಪುಲೆ ಹೆಸರಿನಲ್ಲಿ ಕೊಡ ಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ *ರಾಜೇಶ್ವರಿ* ಮತ್ತು ಎನ್ ಆರ್ ಪುರ ಮೋಹಲ್ಲಾ ಕ್ಯಾಂಪಿನ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ *ಮಹಾ ಜಬೀನಾ* ಅವರು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಭಾಜನರಾದರು.

ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ *ಸಿ.ಆರ್. ಜಯಣ್ಣ* ಮತ್ತು ಕರೆ ಕಲ್ಲಹಳ್ಳಿ ಕಿರಿಯ ಪ್ರಾರ್ಥಮಿಕ ಶಾಲೆಯ *ಯೋಗೇಶ್ ಹೆಚ್.ಪಿ* ಅವರು ಜ್ಯೋತಿ ಬಾಪುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದರು. ಇತ್ತೀಚಿಗೆ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಎಕ್ಸಲೆಂಟ್ ಪಿಯು ಕಾಲೇಜ್ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು, ರಾಜ್ಯದಾದ್ಯಂತ ಒಟ್ಟು ಐವತ್ತು ಶಿಕ್ಷಕ/ ಶಿಕ್ಷಕಿಯರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಈ ಗೌರವವನ್ನು ಸ್ವೀಕರಿಸಿದ್ದಾರೆ.

ವಿಜಯಪುರ ಜಿಲ್ಲಾ ಕೆಜೆವಿಎಸ್ ಘಟಕದ ಅಧ್ಯಕ್ಷರಾದ ಜಿ.ಎಸ್.ಕಾಂಬ್ಳೆ ಮತ್ತು ಕಾರ್ಯದರ್ಶಿ ರಮೇಶ್ ನಾಯಕ್ ಹಾಗೂ ಉಪನ್ಯಾಸಕ ಪ್ರೊ. ಶಿವಾನಂದ್ ಕಲ್ಯಾಣಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಎಲ್ಲ ಪ್ರಶಸ್ತಿ ಪುರಸ್ಕೃತರಿಗೆ ಮತ್ತು ಆಯೋಜಕರಿಗೆ ಚಿಕ್ಕಮಗಳೂರು ಜಿಲ್ಲಾ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಎಂ ಮಂಜುನಾಥಸ್ವಾಮಿ ಈ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ .

Four teachers from Chikkamagaluru district win state-level best teacher award

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...