Home namma chikmagalur lawyers protest: ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ವಿರುದ್ಧ ವಕೀಲರ ಪ್ರತಿಭಟನೆ
namma chikmagalur

lawyers protest: ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ವಿರುದ್ಧ ವಕೀಲರ ಪ್ರತಿಭಟನೆ

Share
ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ವಕೀಲರ ಪ್ರತಿಭಟನೆ
ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ವಕೀಲರ ಪ್ರತಿಭಟನೆ
Share

ಚಿಕ್ಕಮಗಳೂರು: ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ವಕೀಲರೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ತರೀಕೆರೆ, ಚಿಕ್ಕಮಗಳೂರು, ಕಡೂರು ಮತ್ತು ಮೂಡಿಗೆರೆಯಲ್ಲಿ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದರು. ನಂತರ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಭೂವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಉಪವಿಭಾಗಾಧಿಕಾರಿಗೆ ತಲುಪಿಸಲು ಕಡೂರಿನ ವಕೀಲ ಹರೀಶ್ ಬುಧವಾರ ಸಂಜೆ ತೆರಳಿದ್ದರು. ಇದಕ್ಕೂ ಮುನ್ನ ಉಪವಿಭಾಗಾಧಿಕಾರಿ ಮಾಡಿದ್ದ ಆದೇಶ ಕಾನೂನಿಗೆ ವಿರುದ್ಧವಾಗಿದೆ ಎಂದು ಹರೀಶ್ ಅವರ ಕಕ್ಷೆದಾರರು ಮುಖ್ಯಮಂತ್ರಿಗೆ ದೂರ ನೀಡಿದ್ದರು. ಇದರಿಂದ ಕೋಪಗೊಂಡಿದ್ದ ಉಪವಿಭಾಗಾಧಿಕಾರಿ ಕಾಂತರಾಜ್ ಅವರು ವಕೀಲ ಹರೀಶ್ ಅವರನ್ನು ಮನ ಬಂದಂತೆ ನಿಂದಿಸಿದ್ದಾರೆ ಎಂಬುದು ವಕೀಲರ ಆರೋಪ.

ಹೈಕೋರ್ಟ್ ಆದೇಶದ ಪ್ರತಿಯನ್ನು ಮುಖದ ಮೇಲೆ ಎಸೆದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಮೊಬೈಲ್ ಫೋನ್ ಕಸಿದುಕೊಂಡರು. ಬೇರೆ ವ್ಯಕ್ತಿಗಳನ್ನು ಕಚೇರಿಗೆ ಕರೆಸಿಕೊಂಡು ಬೆದರಿಸಿದರು. ಪೊಲೀಸರನ್ನೂ ಕರೆಸಿ ದೌರ್ಜನ್ಯ ನಡೆಸಲು ಯತ್ನಿಸಿದರು’ ಎಂದು ವಕೀಲ ಹರೀಶ್ ಜಿಲ್ಲಾಧಿಕಾರಿಗೆ ವಿವರಿಸಿದರು.

Lawyers protest against Tarikere Sub-Divisional Officer K.J. Kantaraj

 

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...