Home Protest ban:ಹನುಮಂತಪ್ಪ ವೃತ್ತ – ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಪ್ರತಿಭಟನೆ ನಿಷೇಧ
Home

Protest ban:ಹನುಮಂತಪ್ಪ ವೃತ್ತ – ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಪ್ರತಿಭಟನೆ ನಿಷೇಧ

Share
Share

ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಪ್ರತಿಭಟನೆ ಮಾಡದಂತೆ ಜಿಲ್ಲಾಧೀಕಾರಿ ಮೀನಾನಾಗರಾಜ್‌  ಆದೇಶ ಹೊರಡಿಸಿದ್ದಾರೆ.

ದಿಢೀರ್ ಪ್ರತಿಭಟನೆ, ಧರಣ, ಮುಷ್ಕರ, ‌ರಸ್ತೆ ತಡೆಯಿಂದ‌ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿದ್ದು ಇದನ್ನು ಮನಗಂಡು ಜಿಲ್ಲಾಡಳಿತ  ಈ ಕ್ರಮ ಕೈಗೊಂಡಿದೆ. ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಛೇರಿ, ಬಡಾಮಖಾನ್ ದರ್ಗಾ‌ ಇರುವುರಿಂದ ಕಾನೂನು ಸುವ್ಯವಸ್ಥೆ ದೃಷ್ಟಿ/ ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ಹೊರಡಿಸಿದೆ. ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಿದ್ದಾರೆ.

ಹನುಮಂತಪ್ಪ  ವೃತ್ತ /ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆ ಧರಣಿ ನಡೆಸಿದಂತೆ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ, ನ್ಯಾಯಾಧೀಶರು ಅಧಿಕಾರಿಗಳ ವಸತಿ ಗ್ರಹ ಇರುವುದರಿಂದ ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ವಿಧಿಸಲು ಕಾರಣ ನೀಡಲಾಗಿದೆ.ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿರ್ಬಂಧ ವಿಧಿಸುವುದು ಹೊಸತೇನಲ್ಲ ಆದರೆ, ಹನುಮಂತಪ್ಪ

ವೃತ್ತದ ಸುತ್ತಮುತ್ತ ನಿಷೇಧಾಜ್ಞೆ ವಿಧಿಸುವ ಮೂಲಕ ಜಿಲ್ಲಾಡಳಿತ ಟೀಕೆಗೆ ಗುರಿಯಾಗಿದೆ.

Hanumanthapa Circle – Protest ban around District Magistrate’s office

Share

Leave a comment

Leave a Reply

Your email address will not be published. Required fields are marked *

Don't Miss

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಭಾನುವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕ ಮಹಿಳೆಯನ್ನು ಭೀಕರವಾಗಿ ಕೊಂದ...

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡನ್ನು ಬೆಚ್ಚಿಬೀಳಿಸಿದೆ. ನಗರದ ಪುನೀತ್‌...

Related Articles

ಖಂಡ್ರೆ ಸಭೆಯಿಂದ ಕಾಡು ಪ್ರಾಣಿಗಳ “ಅನಾಹುತ” ನಿಲ್ಲಿಸಲು ಸಾಧ್ಯವೇ ?

ಅರಣ್ಯ ಸಚಿವ ಖಂಡ್ರೆ(ಕಂಡರೆ) ಆನೆ,ಹುಲಿ.ಸಿಂಹ,ಇಲಿ,ಪಲ್ಲಿಗಳು ನಡುಗುತ್ತವೆ ಎಂಬ ಭ್ರಮೆ ಯಲ್ಲಿ ಬಾಳೆ ಹೊನ್ನೂರಲ್ಲಿ ರೈತರು,ಬೆಳೆಗಾರರು ಮತ್ತು...

ಭೀಕರ ಕೊಲೆ ಆರೋಪಿಗೆ ಜೈಲು ಶಿಕ್ಷೆ-ದಂಡ

ಮೂಡಿಗೆರೆ: ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣದ ಆರೋಪಿಗೆ ಚಿಕ್ಕಮಗಳೂರಿನ ಜಿಲ್ಲಾ ಮತ್ತು...

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ. ದುಬೈ ವಿಮಾನ ನಿಲ್ದಾಣದಿಂದ...

ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ...