Home Latest News Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?
Latest NewsHomePolitical News

Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?

Share
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಅಜಿತ್ ರಂಜನ್ ಕುಮಾರ್ ಬಹುತೇಕ ಕಾಂಗ್ರೆಸ್ ಸೇರುವುದು ಖಚಿತ.

ಮೂಡಿಗೆರೆ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಗೀತಾರನ್ನು ಕೂರಿಸಲು ಕಾಂಗ್ರೆಸ್ ನವರ ಬೆಂಬಲ ಪಡೆದು ಐದು ತಿಂಗಳ ಹಿಂದೆ ತೀರ್ಮಾನವಾಗಿತ್ತು.

ಗೀತಾ ರಾಜೀನಾಮೆ ನೀಡಿ ಇಂದು ಪಟ್ಟಣ ಪಂಚಾಯತಿ ಸದಸ್ಯರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸುವುದಕ್ಕಿಂತ ಎಲ್ಲರಿಗೂ ತಿಳಿದ ವಿಚಾರ.

ರಂಜನ್ ಬಿಜೆಪಿಯಲ್ಲಿ ಗುರ್ತಿಸಿಕೊಂಡು ನಂತರ ಜಾ,ದಳ ಸೇರ್ಪಡೆಯಾಗಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಿ ನಂತರ ಜಿಲ್ಲಾ ಜಾ,ದಳದ ಜಿಲ್ಲಾ ಅಧ್ಯಕ್ಷರಾಗಿದ್ದು ಈಗ ಕಾಂಗ್ರೆಸ್ ನವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶಾಸಕಿ ನಯನ ಮೋಟಮ್ಮ ಸುಪ್ರೀಂ ಹೀಗಾಗಿ ನಯನ ತೀರ್ಮಾನ ಮಾಡಿದ್ದು ಬಹುತೇಕ ಅಲ್ಲ ಖಚಿತವಾಗಿ ಕಾಂಗ್ರೆಸ್ ಸೇರುವುದು ಗ್ಯಾರಂಟಿ.

ಈ ಬಗ್ಗೆ ನ್ಯೂಸ್ ಕಿಂಗ್ ಅಜಿತ್ ರಂಜನ್ ಕುಮಾರ್ ರವರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಿದಾಗ ಸದ್ಯದಲ್ಲಿ ಪತ್ರಿಕಾ ಗೋಷ್ಠಿ ಕರೆದು ತಿಳಿಸುವುದಾಗಿ ಹೇಳಿದ್ದಲ್ಲದೆ ಇಲ್ಲಿದ್ದು ಏನು ಮಾಡುವುದು ಎಂದು ಹೇಳಿದ್ದಾರೆ.

ಜಾ,ದಳದ ಪ್ರಮುಖ ವಿಕೆಟ್ ಪತನವಾಗುವುದು ಖಚಿತ. ಅಜಿತ್ ರಂಜನ್ ಕುಮಾರ್ ಕಾಂಗ್ರೆಸ್ ಸೇರುವುದು ಫಿಕ್ಸ್ ಆಗಿದೆ.

Janata Dal Secular district president Ajit Ranjan joins Congress?

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...