Home Latest News ಸಿಡಿಲು ಬಡಿದ ಕುರಿಗಾಹಿ ಸ್ಥಳದಲ್ಲೇ ಸಾವು
Latest NewschikamagalurHomenamma chikmagalur

ಸಿಡಿಲು ಬಡಿದ ಕುರಿಗಾಹಿ ಸ್ಥಳದಲ್ಲೇ ಸಾವು

Share
Share

ಚಿಕ್ಕಮಗಳೂರು: ಹೊಲದಲ್ಲಿ ಕುರಿಗಳನ್ನು ಕಾಯುತ್ತಿದ್ದ ಕುರಿಗಾಹಿಗೆ ಸಿಡಿಲು ಬಡಿದ ಪರಿಣಾಮ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಗೆದ್ದೆಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮದ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (೪೮) ಎಂಬವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಧ್ಯಾಹ್ನದ ಬಳಿಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ವರುಣ ಧಾರಾಕಾರವಾಗಿ ಗುಡುಗು ಸಿಡಿಲಿನೊಂದಿಗೆ ಅಬ್ಬರಿಸಿದ ಪರಿಹಾದು ಈ ಘಟನೆ ನಡೆದಿದೆ.

ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ತರೀಕೆರೆ, ಕಡೂರು ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ಮಧ್ಯಾಹ್ನದ ಬಳಿಕ ಮಳೆ ಬಂದಿದೆ.

ಚಿಕ್ಕಮಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಧ್ಯಾಹ್ನ ೪.೨೫ರ ವೇಳೆಗೆ ಗುಡುಗು ಸಹಿತ ಆರಂಭವಾದ ಮಳೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿಯಿತು.

ಮಳೆಯ ಅರ್ಭಟದಿಂದಾಗಿ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆಯಾಗಿತ್ತು. ಕೊಪ್ಪ ತಾಲೂಕಿನ ಭಂಡಿಗಡಿ, ಹರಿಹರಪುರ, ನಾರ್ವೆ ಭಾಗದಲ್ಲಿ ಮಧ್ಯಾಹ್ನ ೪ ಗಂಟೆಗೆ ಸಾಧಾರಣ ಮಳೆ ಬಂದಿದ್ದು, ತರೀಕೆರೆ ತಾಲೂಕಿನಲ್ಲಿ ಸಂಜೆ ೫ ಗಂಟೆಯ ವೇಳೆಗೆ ಗುಡುಗು ಸಹಿತ ತುಂತುರು ಮಳೆ ಸುರಿಯಿತು.

ಕಡೂರಿನಲ್ಲಿ ಸಂಜೆ ೭ ಗಂಟೆಗೆ ಸಾಧಾರಣ ಮಳೆಯಾಗಿದ್ದರೆ, ಎನ್.ಆರ್.ಪುರ ತಾಲೂಕಿನ ಸೀತೂರು, ಕಾನೂರು ಸುತ್ತಮುತ್ತ ಸಂಜೆ ೪ ಗಂಟೆಗೆ ಸಾಧಾರಣ ಮಳೆ ಬಂದಿತು. ಶೃಂಗೇರಿ ತಾಲೂಕಿನಲ್ಲೂ ಸಂಜೆ ೭ ಗಂಟೆಯ ವೇಳೆಗೆ ಗುಡುಗು ಸಹಿತ ಮಳೆ ಬಂದಿತು.

Shepherd struck by lightning dies on the spot

 

 

 

 

Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆ ನಡುವೆ ಗಿರಿಪ್ರದೇಶಕ್ಕೆ ಪ್ರವಾಸಿಗರ ಧಾಂಗುಡಿ

ಚಿಕ್ಕಮಗಳೂರು: ನಗರ ಸಮೀಪದ ಗಿರಿಪ್ರದೇಶದಲ್ಲಿ ಧಾರಾಕಾರ ಮಳೆಸುರಿಯುತ್ತಿದ್ದು, ಇದರ ನಡುವೆಯೇ ಗಿರಿಭಾಗಕ್ಕೆ ಭಾರೀ ಪ್ರವಾಸಿಗರ ದಂಡು ಭೇಟಿಕೊಟ್ಟಿದೆ. ಕಾರು, ಬೈಕ್, ಟಿಟಿ ಸೇರಿದಂತೆ ೧೮೫೦ ವಾಹನಗಳು ಗಿರಿಭಾಗಕ್ಕೆ ಪ್ರವಾಸಿಗರನ್ನು ಕರೆದೊಯ್ದಿದೆ. ಭಾರೀ...

ಮೈಮೆಲೆ ಬಿಸಿನೀರು ಬಿದ್ದು ಹೆಣ್ಣುಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...

Related Articles

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ...

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...