Home Latest News ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರ ಗ್ರಾಚ್ಯುಟಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Latest NewschikamagalurHomenamma chikmagalur

ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರ ಗ್ರಾಚ್ಯುಟಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಈಗಾಗಲೇ ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಗಳಿಗೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಇಂದು ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು.

ಶನಿವಾರ ಬೆಳಿಗ್ಗೆ ಚಿಕ್ಕಮಗಳೂರು ನಗರದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ ನೂರಕ್ಕೂ ಹೆಚ್ಚು ನಿವೃತ್ತಿಹೊಂದಿರುವ ಅಂಗನವಾಡಿ ನೌಕರರು ತಮ್ಮ ಇಳಿ ವಯಸ್ಸಿನಲ್ಲಿ ಜೀವನ ನಿರ್ವಹಿಸಲು ಅನುಕೂಲ ವಾಗುವಂತೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸಬೇಕೆಂದು ಆಗ್ರಹಿಸುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈಗಾಗಲೇ ರಾಜ್ಯ ಸರ್ಕಾರ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿಯನ್ನು ಜಾರಿಗೊಳಿಸಿದ್ದು, ೨೦೨೩ನೇ ಸಾಲಿನಿಂದ ನಿವೃತ್ತರಾದವರಿಗೆ ಮಾತ್ರ ಅನ್ವಯಿಸಿ ಆದೇಶಿಸಿದೆ. ಆದರೆ ಸೇವೆಗೆ ಸೇರಿ ೨೦೧೧- ೧೨ ರಿಂದ ನಿವೃತ್ತಿಗೊಂಡ ನೌಕರರನ್ನು ಗ್ರಾಚ್ಯುಟಿ ವ್ಯಾಪ್ತಿಗೆ ಒಳಪಡಿಸದೆ ಇರುವುದರಿಂದ ವಯೋವೃದ್ಧರ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಆದುದರಿಂದ ರಾಜ್ಯ ಸರ್ಕಾರ ಕೂಡಲೇ ಅಂಗನವಾಡಿ ಸೇವೆಗೆ ಸೇರಿ ನಿವೃತ್ತರಾಗಿರುವ ಎಲ್ಲರಿಗೂ ಗ್ರಾಚ್ಯುಟಿಯನ್ನು ಬಿಡುಗಡೆ ಮಾಡಬೇಕೆಂದು ಕೋರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಬಿ.ಅಮ್ಜದ್ ಜಿಲ್ಲಾಧ್ಯಕ್ಷೆ ಗ್ರೇಟ್ಟಾ ಫರ್ನಾಂಡಿಸ್ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಮಗಳೂರಿನ ಶೈಲಾ ಬಸವರಾಜು, ಕಡೂರಿನ ಯು. ಆರ್. ಪಾರ್ವತಮ್ಮ, ಮೂಡಿಗೆರೆ ಶೈಲಾ ನಾರಾಯಣಗೌಡ, ತರೀಕೆರೆಯ ಸವಿತಾ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್. ಎಲ್. ರಾಧಾ ಸುಂದರೇಶ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಸಿ. ಧರ್ಮರಾಜು ಹಾಗೂ  ಜಿ. ರಮೇಶ್ ಇದ್ದg ಇದ್ದರು

Protest demanding gratuity benefits for retired Anganwadi workers

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...