Home Latest News ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರ ಗ್ರಾಚ್ಯುಟಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Latest NewschikamagalurHomenamma chikmagalur

ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರ ಗ್ರಾಚ್ಯುಟಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಈಗಾಗಲೇ ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಗಳಿಗೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಇಂದು ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು.

ಶನಿವಾರ ಬೆಳಿಗ್ಗೆ ಚಿಕ್ಕಮಗಳೂರು ನಗರದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ ನೂರಕ್ಕೂ ಹೆಚ್ಚು ನಿವೃತ್ತಿಹೊಂದಿರುವ ಅಂಗನವಾಡಿ ನೌಕರರು ತಮ್ಮ ಇಳಿ ವಯಸ್ಸಿನಲ್ಲಿ ಜೀವನ ನಿರ್ವಹಿಸಲು ಅನುಕೂಲ ವಾಗುವಂತೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸಬೇಕೆಂದು ಆಗ್ರಹಿಸುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈಗಾಗಲೇ ರಾಜ್ಯ ಸರ್ಕಾರ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿಯನ್ನು ಜಾರಿಗೊಳಿಸಿದ್ದು, ೨೦೨೩ನೇ ಸಾಲಿನಿಂದ ನಿವೃತ್ತರಾದವರಿಗೆ ಮಾತ್ರ ಅನ್ವಯಿಸಿ ಆದೇಶಿಸಿದೆ. ಆದರೆ ಸೇವೆಗೆ ಸೇರಿ ೨೦೧೧- ೧೨ ರಿಂದ ನಿವೃತ್ತಿಗೊಂಡ ನೌಕರರನ್ನು ಗ್ರಾಚ್ಯುಟಿ ವ್ಯಾಪ್ತಿಗೆ ಒಳಪಡಿಸದೆ ಇರುವುದರಿಂದ ವಯೋವೃದ್ಧರ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಆದುದರಿಂದ ರಾಜ್ಯ ಸರ್ಕಾರ ಕೂಡಲೇ ಅಂಗನವಾಡಿ ಸೇವೆಗೆ ಸೇರಿ ನಿವೃತ್ತರಾಗಿರುವ ಎಲ್ಲರಿಗೂ ಗ್ರಾಚ್ಯುಟಿಯನ್ನು ಬಿಡುಗಡೆ ಮಾಡಬೇಕೆಂದು ಕೋರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಬಿ.ಅಮ್ಜದ್ ಜಿಲ್ಲಾಧ್ಯಕ್ಷೆ ಗ್ರೇಟ್ಟಾ ಫರ್ನಾಂಡಿಸ್ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಮಗಳೂರಿನ ಶೈಲಾ ಬಸವರಾಜು, ಕಡೂರಿನ ಯು. ಆರ್. ಪಾರ್ವತಮ್ಮ, ಮೂಡಿಗೆರೆ ಶೈಲಾ ನಾರಾಯಣಗೌಡ, ತರೀಕೆರೆಯ ಸವಿತಾ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್. ಎಲ್. ರಾಧಾ ಸುಂದರೇಶ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಸಿ. ಧರ್ಮರಾಜು ಹಾಗೂ  ಜಿ. ರಮೇಶ್ ಇದ್ದg ಇದ್ದರು

Protest demanding gratuity benefits for retired Anganwadi workers

Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ತಾಲ್ಲೂಕಿನಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಇಡೀ ದಿನ‌ ಬಿಡುವಿಲ್ಲದೇ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ತಾಲ್ಲೂಕಿನ ಗಂಗನಮಕ್ಕಿ ಗ್ರಾಮದಲ್ಲಿ ಮಂಜುನಾಥ್ ಹಾಗೂ ಗಿರೀಶ್ ಅವರಿಗೆ ಸೇರಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಅಪಾರ ಪ್ರಮಾಣದ...

40 ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ 9ನೇ ಮೈಲಿಕಲ್ಲು ಸಮೀಪದಲ್ಲಿ ಪೈಪ್‌ಲೈನ್ ಕಾಮಗಾರಿ ಜಾಗದಲ್ಲಿದ್ದ ₹ 40ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಬಂಧಿಸಿ,...

Related Articles

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು...

ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ ೧೦೩...

ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ...

ದೇಶ ಸುಭದ್ರಗೊಳಿಸಲು ಯುವಕರು ಯೋಧರಾಗಿ

ಚಿಕ್ಕಮಗಳೂರು:  ಭವ್ಯ ಭಾರತದ ಕನಸನ್ನು ಹೊತ್ತಿರುವ ಯುವಕರು ವಯಸ್ಸಿನಲ್ಲಿ ವ್ಯಸ ನಗಳ ಚಟಕ್ಕೆ ಬಲಿಯಾಗದೇ, ದೇಶವನ್ನು...