Home ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !
HomeLatest Newsnamma chikmagalur

ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !

Share
Share

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಕರಣಗಳ ಸಭೆ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಸುನೀಲ್ ವಲ್ಲಾಪುರೆ,ಅನಿಲ್ ಕುಮಾರ್, ಎಸ್.ಪಿ.ಸುಂಕನೂರ್,ಎಂ.ಪಿ ಸುಜಾ ಕುಶಾಲಪ್ಪ ಮತ್ತು ಶಾಸಕ ಹೆಚ್.ಡಿ.ತಮ್ಮಯ್ಯ ಭಾಗವಹಿಸಿದ್ದರು.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು ಅದಕ್ಕೆ ಒತ್ತು ನೀಡಬೇಕು ಮತ್ತು ಇರುವ ಪ್ರಕರಣಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಸಭೆ ನಿರ್ಣಯಿಸಿತು.

ಸಭೆಯ ಸ್ವಾರಸ್ಯ ಎಂದರೆ ಈ ಸಭೆ ನಡೆಸಲು ಹಲವು ಇಲಾಖೆಗಳಿಂದ ವಸೂಲಿ ಮಾಡಿರುವುದು .ಬಹುತೇಕ ಇಲಾಖೆಗಳಿಂದ ಇಂತಿಷ್ಟು ಎಂದು ವಸೂಲಿ ಮಾಡಿದವರು ಯಾರು? ಮತ್ತು ಏಕೆ ? ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿಲ್ಲ ಬಂದಂತವರಿಗೆ ಭರ್ಜರಿ ಗಿಫ್ಟ್ ಕೊಡಲು ಎನ್ನಲಾಗಿದೆ.ಇವರಿಗೆಲ್ಲಾ ಟಿ.ಎ. ಡಿ.ಎ.ಉಚಿತ ವಸತಿ,ಊಟ,ತಿಂಡಿ ಓಡಾಡಲು ಕಾರು ಸರ್ಕಾರ ಕೊಟ್ಟರು ಕೂಡ ಇಲಾಖಾವಾರು ವಸೂಲಿ ಮಾಡಿದವರು ಯಾರು ? ಇನ್ನೂ ಸ್ವಾರಸ್ಯ ಸಂಗತಿಯೆಂದರೆ ಇವರಿಗೆಲ್ಲಾ ಸಭೆ ನೆಪ ಮಾತ್ರಕ್ಕೆ ,ಬಂದಿದ್ದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡರ ಮಗನ ಮದುವೆಗೆ ಎಂಬುದು ಬಹಿರಂಗ ಸತ್ಯ.

ಸಭೆಯು ಆಯಿತು, ಭರ್ಜರಿ ಗಿಫ್ಟ್ ಸಿಕ್ಕತು ಮತ್ತು ಮದುವೆಯಲ್ಲಿ ಭಾಗಿಯಾಗಿ ಮೂರು ದಿನ ಗ್ಯಾರಂಟಿ ಸರ್ಕಾರದ ಸೇವೆ ಅನುಭವಿಸದ್ದು ಆಯಿತು .

Tourism development meeting!

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...