Home namma chikmagalur ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ
namma chikmagalurchikamagalurHomeLatest News

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

Share
Share

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ ಗಂಟೆಗೂ ಹೆಚ್ಚು ಕಾಲ ನೀರಾಟವಾಡಿದೆ.

ಗೋಣಿಬೀಡು ಹೋಬಳಿಯಲ್ಲಿ ಒಂದೂವರೆ ತಿಂಗಳಿನಿಂದಲೂ ಬೀಡುಬಿಟ್ಟಿರುವ ಒಂಟಿ ಕಾಡಾನೆಯು ಕೆಲ ದಿನಗಳ ಹಿಂದೆ ಮನೆಯೊಳಗೆ ಪ್ರವೇಶಿಸುವ ಯತ್ನ ನಡೆಸಿ ಭೀತಿಗೊಳಿಸಿತ್ತು.

ಕಾಡಾನೆ ಕೃಷಿ ಹೊಂಡಕ್ಕೆ ಇಳಿದಿರುವ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದು, ವಿಡಿಯೊ, ಫೋಟೊ ಸೆರೆ ಹಿಡಿದರೂ ಕೃಷಿ ಹೊಂಡದಿಂದ ಕಾಡಾನೆ ಮೇಲೆ ಬರಲಿಲ್ಲ. ಬಳಿಕ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಕೃಷಿ ಹೊಂಡದಿಂದ ಓಡಿಸಿದ್ದು, ಪಕ್ಕದಲ್ಲಿರುವ ಅರಣ್ಯ ಪ್ರದೇಶ ಸೇರಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಒಂಟಿ ಕಾಡಾನೆ ಆತಂಕ: ಮಾಕೋನಹಳ್ಳಿ, ನಂದೀಪುರ, ಗೋಣಿಬೀಡು ಗ್ರಾ.ಪಂಗಳ ಸುತ್ತಮುತ್ತಲ ಪ್ರದೇಶಗಳಲ್ಲಿಯೇ ಒಂದೂವರೆ ತಿಂಗಳಿನಿಂದ ಓಡಾಡುತ್ತಿರುವ ಕಾಡಾನೆಯು, ಇತ್ತೀಚೆಗೆ ಹಗಲಿನಲ್ಲಿಯೂ ಕಾಣಿಸಿಕೊಳ್ಳು ತ್ತಿರುವುದು ಸ್ಥಳೀಯರಿಗೆ ಆತಂಕ ಮೂಡಿಸಿದೆ.

ರಾತ್ರಿಯಾಗುತ್ತಿದ್ದಂತೆ ಮನೆಯಂಗಳಕ್ಕೆ ಬರುವ ಕಾಡಾನೆಯು ಕಾಫಿ ತೋಟ, ಮನೆಯಂಗಳದಲ್ಲಿ ಬೆಳೆದಿರುವ ಬೆಳೆಗಳನ್ನು ನಾಶ ಮಾಡುತ್ತಿದ್ದು, ಬೆಳಕು ಮೂಡಿದರೂ ಗ್ರಾಮದೊಳಗೆ ಕಾಣಿಸಿಕೊಳ್ಳುತ್ತಿದ್ದು ಜೀವ ಭಯದಿಂದಿರುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Wild elephants watering in an agricultural pond in Kammaragod village

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...