Home ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕ ವಿಸ್ತರಣೆ
HomechikamagalurLatest Newsnamma chikmagalur

ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕ ವಿಸ್ತರಣೆ

Share
Share

ಚಿಕ್ಕಮಗಳೂರು: ಹೆಚ್ಚು ಮಳೆಯಿಂದ ಹಾಗೂ ಬೇರೆ ಬೇರೆ ಕಾರಣಗಳಿಂದ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಸಮಿತಿ ಶಿಫಾರಸ್ಸಿನಂತೆ ಈಗಾಗಲೇ ನಿಗದಿಯಾಗಿದ್ದ ಪರಿಶಿ? ಜಾತಿ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ ಮಾಹಿತಿ ನೀಡಿದರು. ಆಯೋಗದ ಶಿಫಾರಸ್ಸಿನಂತೆ ಗಣತಿದಾರರು ಮನೆ-ಮನೆ ಸಮೀಕ್ಷೆಗೆ ಬರುವ ಸಂದರ್ಭದಲ್ಲಿ ಪರಿಶಿ? ಜಾತಿ ಸಮುದಾಯದವರು ಈ ಕೆಳಗೆ ಸೂಚಿಸಿದಂತೆ ಮಾಹಿತಿಯನ್ನು ನೀಡಬೇಕು.

ಮೊದಲ ಹಂತದ ಸಮೀಕ್ಷೆಯ ದಿನಾಂಕವನ್ನು ಮೇ ೫ ರಿಂದ ೨೫ ರವರೆಗೆ ವಿಸ್ತರಿಸಲಾಗಿದ್ದು. ಸಿಬ್ಬಂದಿಗಳು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ನಡೆಸಲು ಜಿಲ್ಲೆಯ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗಿದೆ. ಗಣತಿದಾರರು ಮನೆ-ಮನೆಗೆ ಭೇಟಿ ನೀಡಿದಾಗ, ಕರ್ನಾಟಕದ ಪರಿಶಿ? ಜಾತಿಯ ಪಟ್ಟಿಯಲ್ಲಿರುವ ಜಾತಿಗಳ ಮತ್ತು ಉಪಜಾತಿಗಳ ಮಾಹಿತಿಯನ್ನು ಸಮುದಾಯದವರು ಕಡ್ಡಾಯವಾಗಿ ನೀಡಬೇಕು ಎಂದು ಸೂಚಿಸಿದರು.

ಆದಿಕರ್ನಾಟಕ, ಆದಿದ್ರಾವಿಡ, ಅದಿಆಂಧ್ರ ಎಂದು ನಮೂದಿಸಿದ್ದರೆ ಅಂಥವರು ಅದರ ಜೊತೆಗೆ ತಮ್ಮ ಉಪಜಾತಿಯನ್ನು ಕಡ್ಡಾಯವಾಗಿ ನಮೂದಿಸಬೇಕು ಹಾಗೂ ಸಮೀಕ್ಷೆಯಲ್ಲಿ ಪರಿಶಿ? ಜಾತಿ ಜನಾಂಗದವರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯಗಳು ಮುಂತಾದ ಸಾಮಾನ್ಯ ಮಾಹಿತಿಗಳು, ಆರ್ಥಿಕತೆಗೆ ಸಂಬಂಧಿಸಿದ ಮಾಹಿತಿಗಳು, ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ, ವೃತ್ತಿ, ಭೂಮಿಯ ಒಡೆತನ, ಮನೆ, ಆದಾಯ, ಮಾನವ ಅಭಿವೃದ್ಧಿ, ಸರ್ಕಾರದಿಂದ ಪಡೆದಿರುವ ಸೌಲಭ್ಯಗಳು, ರಾಜಕೀಯ ಪ್ರಾತಿನಿಧ್ಯತೆ ಇತ್ಯಾದಿ ವಿ?ಯಗಳ ಕುರಿತು ನೀಡಬೇಕಾಗಿರುತ್ತದೆ ಎಂದು ಹೇಳಿದರು.

ಎರಡನೇ ಹಂತದ ಸಮೀಕ್ಷೆಯನ್ನು ಮೇ ೨೬ ರಿಂದ ೨೮ ರವರೆಗೆ ಮರು ನಿಗದಿಪಡಿಸಲಾಗಿದ್ದು, ಈ ಸಮೀಕ್ಷೆಯಲ್ಲಿ ಗುರುತಿಸಿರುವ ಮತಗಟ್ಟೆ ಪ್ರದೇಶದಲ್ಲಿ ಏರ್ಪಡಿಸಲಾಗುವ ವಿಶೇ? ಶಿಬಿರಗಳಿಗೆ ಈಗಾಗಲೇ ಮೊದಲ ಹಂತದಲ್ಲಿ ಮಾಹಿತಿ ಸಲ್ಲಿಸದೇ ಅಥವಾ ಸಮೀಕ್ಷೆಗೆ ಒಳಪಡದೇ ಇರುವ ಪರಿಶಿ? ಜಾತಿಯವರು ತೆರಳಿ, ಗಣತಿದಾರರಿಗೆ ಜಾತಿ ಕುರಿತು ಸ್ಪ? ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

ಮೂರನೇ ಹಂತದ ಸಮೀಕ್ಷೆಯಲ್ಲಿ ಆನ್‌ಲೈನ್ ಮೂಲಕ ವೆಬ್‌ಸೈಟ್‌ನಲ್ಲಿ ಸ್ವಯಂ ಘೋ?ಣೆ ಮಾಡುವ ಸಮೀಕ್ಷೆಯನ್ನು ಮೇ ೧೯ ರಿಂದ ೨೮ ರವರೆಗೆ ವಿಸ್ತರಿಸಲಾಗಿದ್ದು, ಸ್ವಯಂ ಘೋ?ಣೆಗೆ ಆಧಾರ್ ನಂಬರ್ ಹಾಗೂ ಜಾತಿ ಪ್ರಮಾಣ ಪತ್ರದ ಆರ್.ಡಿ. ನಂಬರ್ ಅನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಹೇಳಿದರು.

ಸಮೀಕ್ಷೆಯನ್ನು ಕೈಗೊಳ್ಳುವುದಕ್ಕಾಗಿ ಒಟ್ಟು ೧೫೩೪ ಶಿಕ್ಷಕರುಗಳನ್ನು ಗಣತಿದಾರರನ್ನಾಗಿ ಹಾಗೂ ೧೫೩ ಮುಖ್ಯ ಶಿಕ್ಷಕರನ್ನು ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದ್ದು, ಹೆಚ್ಚುವರಿಯಾಗಿ ೧೮೫ ಗಣತಿದಾರರು ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

೨೦೧೧ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು ೫೯,೨೯೬ ಪರಿಶಿ? ಜಾತಿಯ ಕುಟುಂಬಗಳು ಇವೆ. ಇಲ್ಲಿಯವರೆಗೆ ಒಟ್ಟು ೫೨,೯೩೪ ಪರಿಶಿ? ಜಾತಿ ಹಾಗೂ ೨,೪೩,೯೮೬ ಇತರೆ ಜಾತಿಯ ಕುಟುಂಬಗಳ ಒಟ್ಟು ೨,೯೬,೯೨೦ ಕುಟುಂಬಗಳ ಸಮೀಕ್ಷೆಯನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ (೯೯೦೨೧೯೮೩೦೦, ೯೪೮೧೩೫೯೦೦೦, ೯೪೮೩೦೦೪೦೦ ಹಾಗೂ ೯೪೮೦೮೪೩೦೨೮)ಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಡಾ.ವಿಕ್ರಮ್ ಅಮಟೆ, ಉಪವಿಭಾಗಧಿಕಾರಿ ದೇವರಾಜ್,ಸಮಾಜ ಕಲ್ಯಾಣಾಧಿಕಾರಿ ಮಾಲತಿ ಉಪಸ್ಥಿತರಿದ್ದರು.

Extension of date for internal reservation survey for Scheduled Caste families

Share

Leave a comment

Leave a Reply

Your email address will not be published. Required fields are marked *

Don't Miss

ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು,...

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ. ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ...

Related Articles

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ...

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,...

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ...